Select Your Language

Notifications

webdunia
webdunia
webdunia
webdunia

ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ

ಅದಾನಿ ವಿಚಾರದಲ್ಲಿ ತೀವ್ರವಾದ ಪ್ರತಿಪಕ್ಷಗಳ ಪ್ರತಿಭಟನೆ
ನವದೆಹಲಿ , ಮಂಗಳವಾರ, 7 ಫೆಬ್ರವರಿ 2023 (08:30 IST)
ನವದೆಹಲಿ : ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಮಧ್ಯಾಹ್ನ ಎರಡು ಗಂಟೆಗೆ ಮುಂದೂಡಿಕೆಯಾಗಿದೆ. ಅದಾನಿ ವಿಚಾರದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ತೀವ್ರವಾದ ಹಿನ್ನಲೆ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ.

ಸದನ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದ ವಿಪಕ್ಷಗಳು ಸಂಸತ್ತಿನ ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಅದಾನಿ ಪ್ರಕರಣ ತನಿಖೆಯಾಗಬೇಕು ಮತ್ತು ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದವು.

Share this Story:

Follow Webdunia kannada

ಮುಂದಿನ ಸುದ್ದಿ

ಫೈನ್ ಡಿಸ್ಕೌಂಟ್ಗೆ ಫುಲ್ ರೆಸ್ಪಾನ್ಸ್