Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ತೈಲ ಪೂರೈಕೆಯಿಂದ ಹಿಂಸಾತ್ಮಕ ಪ್ರತಿಭಟನೆ !

Webdunia
ಶುಕ್ರವಾರ, 1 ಏಪ್ರಿಲ್ 2022 (09:17 IST)
ಕೊಲಂಬೊ : ಸುಮಾರು ಒಂದು ವಾರದಿಂದಲೂ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ತೈಲ ಪೂರೈಕೆಯಲ್ಲಿ ಕೊರತೆಯುಂಟಾಗಿದ್ದು ಡೀಸೆಲ್ ಮಾರಾಟವನ್ನೇ ಸ್ಥಗಿತಗೊಳಿಸಲಾಗಿದೆ.

ಇದರಿಂದ ಸಾರ್ವಜನಿಕರ ಆಕ್ರೋಶವು ಮಿತಿ ಮೀರಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಳ, ಅಡುಗೆ ಅನಿಲ, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಕೊರತೆಗೆ ಲಂಕಾ ಅಧ್ಯಕ್ಷ ರಾಜಪಕ್ಸೆ ಅವರ ನೀತಿಗಳೇ ಕಾರಣ ಎಂದು ಆರೋಪಿಸಿ ಗುರುವಾರ ತಡರಾತ್ರಿ 5 ಸಾವಿರಕ್ಕೂ ಹೆಚ್ಚು ಮಂದಿ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರ ನಿವಾಸದ ಮುಂದೆ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದಾರೆ.

ಇದೇ ವೇಳೆ ಅವರ ರಾಜೀನಾಮೆಗೂ ಒತ್ತಾಯಿಸಿರುವ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. 

ಪ್ರತಿಭಟನೆಯನ್ನು ಹತ್ತಿಕ್ಕಲು ಅರೆಸೇನಾ ಪೊಲೀಸ್ ಘಟಕ, ವಿಶೇಷ ಕಾರ್ಯಪಡೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸಿಡಿಸಲಾಗಿದೆ.

ಆಕ್ರೋಶಭರಿತ ಪ್ರತಿಭಟನಾಕಾರರು ಪೊಲೀಸರ ಮೇಲೆ ಬಾಟಲಿ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಐವರು ಪೊಲೀಸರಿಗೆ ಗಂಭೀರ ಗಾಯಗಳಾಗಿವೆ. ಅಲ್ಲದೆ ಪೊಲೀಸ್ ಜೀಪ್, 2 ಬೈಕ್ಗಳು ಹಾಗೂ ವಾಟರ್ ಕೆನನ್ ಟ್ರಕ್ ಅನ್ನು ಸುಟ್ಟುಹಾಕಲಾಗಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಮುಂದಿನ ಸುದ್ದಿ
Show comments