Webdunia - Bharat's app for daily news and videos

Install App

ವಕ್ಫ್ ವಿರುದ್ಧ ಪ್ರತಿಭಟನೆ ವೇಳೆ ಶಿವತಿಲಕವಿದ್ದ ಕಾರನ್ನು ಜಖಂಗೊಳಿಸಿದ ಗುಂಪು: Viral video

Krishnaveni K
ಶನಿವಾರ, 12 ಏಪ್ರಿಲ್ 2025 (12:06 IST)
Photo Credit: X
ಕೋಲ್ಕತ್ತಾ: ಇದು ಬಾಂಗ್ಲಾದೇಶವಲ್ಲ, ನಮ್ಮ ದೇಶದ ಪಶ್ಚಿಮ ಬಂಗಾಲದಲ್ಲೇ ನಡೆದ ಘಟನೆ. ವಕ್ಫ್ ವಿರುದ್ಧ ಪಶ್ಚಿಮ ಬಂಗಾಲದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಶಿವತಿಲಕವಿರುವ ವಾಹನವೊಂದನ್ನು ಪ್ರತಿಭಟನಾಕಾರರು ಜಖಂಗೊಳಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಶ್ಚಿಮ ಬಂಗಾಲದಲ್ಲಿ ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ಪ್ರತಿಭಟನೆ ಜೋರಾಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿ ಪ್ರತಿಭಟನಾಕಾರರು ಹಿಂಸಾಚಾರ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೂರಾರು ಮಂದಿಯನ್ನು ಬಂಧಿಸಲಾಗಿದೆ.

ಇದೀಗ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಪ್ರತಿಭಟನಾಕಾರರ ಗುಂಪೊಂದು ಪಶ್ಚಿಮ ಬಂಗಾಲದ ಹೆದ್ದಾರಿಯಲ್ಲಿ ಶಿವನ ತಿಲಕವಿರುವ ಚಿಹ್ನೆಯಿರುವ ಕಾರನ್ನು ತಡೆದು ನಿಲ್ಲಿಸಿ ಮನಸ್ಸಿಗೆ ಬಂದಂತೆ ಜಖಂಗೊಳಿಸುತ್ತಾರೆ.

ವಿಪರ್ಯಾಸವೆಂದರೆ ಅಲ್ಲೇ ಪಕ್ಕದಲ್ಲೇ ಓರ್ವ ಪೊಲೀಸ್ ಸಿಬ್ಬಂದಿಯಿದ್ದರೂ ಏನೂ ಮಾಡದೇ ಸುಮ್ಮನೇ ನಿಂತಿರುತ್ತಾರೆ. ಹಲವರು ಈ ಘಟನೆಗೆ ಸಾಕ್ಷಿಯಾಗಿರುತ್ತಾರೆ. ಆದರೆ ಯಾರೂ ತಡೆಯುವ ಪ್ರಯತ್ನವನ್ನೇ ಮಾಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments