Webdunia - Bharat's app for daily news and videos

Install App

ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಗೆ ಮತ: ಜೆಡಿಯು

Webdunia
ಸೋಮವಾರ, 31 ಜುಲೈ 2017 (20:35 IST)
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜೆಡಿಯು ಶಾಸಕರು ಗೋಪಾಲಕೃಷ್ಣ ಗಾಂಧಿ ಪರವಾಗಿ ಮತಚಲಾಯಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಿಹಾರ್‌ನಲ್ಲಿ ಸಿಎಂ ನಿತೀಶ್ ಕುಮಾರ್ ಮಹಾಮೈತ್ರಿಕೂಟವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿ ಎನ್‌ಡಿಎ ಮೈತ್ರಿಕೂಟದೊಂದಿಗೆ ಸರಕಾರ ರಚಿಸಿದ್ದಾರೆ.
 
ಮಹಾಮೈತ್ರಿಕೂಟವನ್ನು ಮುರಿಯುವ ಮುನ್ನವೇ ಜೆಡಿಯು ಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿಯವರಿಗೆ ಮತಹಾಕುವುದಾಗಿ ಆಶ್ವಾಸನೆ ನೀಡಿದೆ. ಅದರಂತೆ ಉಪರಾಷ್ಟ್ರಪತಿಯವರಿಗೆ ಮತ ಹಾಕುತ್ತೇವೆ. ಇದರ ಬಗ್ಗೆ ಬಿಜೆಪಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
 
ಮಹತ್ವದ ವಿಷಯವೆಂದರೆ ರಾಷ್ಟ್ರಪತಿ ಹುದ್ದೆಗೆ ಗಾಂಧಿಯವರೇ, ಬಿಹಾರ್ ಸಿಎಂ ನಿತೀಶ್ ಕುಮಾರ್ ಆಯ್ಕೆಯಾಗಿದ್ದರು. ಆದರೆ, 18 ವಿಪಕ್ಷಗಳು ಮೀರಾಕುಮಾರ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದವು. ತದನಂತರ ಜೆಡಿಯು ಪಕ್ಷ ಪ್ರಸ್ತುತ ರಾಷ್ಟ್ರಪತಿಯಾಗಿರುವ ರಾಮಾನಾಥ್ ಕೋವಿಂದ್ ಅವರನ್ನು ಬೆಂಬಲಿಸಿತ್ತು.
 
ನಿತೀಶ್ ಕುಮಾರ್ ಬಿಜೆಪಿ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದರಿಂದ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್, ಸಂಸದರಾದ ಅಲಿ ಅನ್ವರ್ ಮತ್ತು ವಿರೇಂದ್ರ ಕುಮಾರ್ ತಮ್ಮ ಅತೃಪ್ತಿಯನ್ನು ಬಹಿರಂಗವಾಗಿ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments