ವಕ್ಫ್ ಬೋರ್ಡ್ ಮುಸ್ಲಿಮರ ವೈಯಕ್ತಿಕ ಕಾನೂನು, ಅದರಲ್ಲಿ ಕೇಂದ್ರ ಮಧ್ಯಪ್ರವೇಶಿಸಬಾರದು: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 8 ಆಗಸ್ಟ್ 2024 (16:32 IST)
ಮೈಸೂರು: ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರದ ಕ್ರಮವನ್ನು, ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಪಕ್ಷ  ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್ ತಿದ್ದುಪಡಿ ಬಿಲ್ ತರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
 
ಬಿಜೆಪಿ ಹಾಗೂ ಎನ್ ಡಿ ಎ ಯವರಿಗೆ ಅಲ್ಪಸಂಖ್ಯಾತರ ಮೇಲೆ ಕೋಪವಿರುವಂತಿದೆ.ಬಿಜೆಪಿಯವರು ಎಂದಿಗೂ ಜಾತ್ಯಾತೀತತೆ, ಸಾಮಾಜಿಕ ನ್ಯಾಯದ ಪರವಾಗಿ ನಿಂತವರಲ್ಲ. ಬಿಜೆಪಿ ಮೊದಲಿನಿಂದಲೂ ಕೋಮುವಾದಿ ಪಕ್ಷವಾಗಿಯೇ ಗುರುತಿಸಿಕೊಂಡಿದ್ದು, ಜಾತ್ಯಾತೀತ ತತ್ವವನ್ನು ನಂಬುವುದಿಲ್ಲ.

ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ ಬೋರ್ಡ್ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ. ವಕ್ಫ್ ಬೋರ್ಡ್ ಕಾನೂನು ಆ ಸಮುದಾಯದ ವೈಯಕ್ತಿಕ ಕಾನೂನಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವುದು ಸಂವಿಧಾನ ಬಾಹಿರ. ಸಂವಿಧಾನದ ತತ್ವಗಳಲ್ಲಿ ನಂಬಿಕೆಯಿರಿಸಿರುವ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟ, ಕೇಂದ್ರದ  ಈ ನಿಲುವನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ ಎಂದರು.
 
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಆರ್ ಟಿ ಐ ಕಾರ್ಯಕರ್ತರು ಮುಖ್ಯಮಂತ್ರಿಗಳ ವಿರುದ್ದ ದೂರು ದಾಖಲಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ,  ಸುಳ್ಳು ಕೇಸುಗಳನ್ನು ದಾಖಲಿಸಿದರೆ, ಅವು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗುವುದಿಲ್ಲ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments