ಗುರಾಯಿಸಿಕೊಂಡು ನೋಡುತ್ತಿದ್ದವರಿಗೆ ವಾರ್ನ್ ಮಾಡಿದ್ದೇ ತಪ್ಪಾಯ್ತ!

Webdunia
ಮಂಗಳವಾರ, 8 ಫೆಬ್ರವರಿ 2022 (08:33 IST)
ಗಾಂಧಿನಗರ : ತನ್ನನ್ನು ಗುರಾಯಿಸಿಕೊಂಡು ನೋಡುವುದನ್ನು ನಿಲ್ಲಿಸುವಂತೆ ಎಚ್ಚರಿಕೆ ನೀಡಿದ 28 ವರ್ಷದ ಮಹಿಳೆ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ ಕಿರುಕುಳ ನೀಡಿರುವ ಘಟನೆ ಶನಿವಾರ ರಾತ್ರಿ ಅಹಮದಾಬಾದ್ನ ಥಾಲ್ತೇಜ್ ಪ್ರದೇಶದಲ್ಲಿ ನಡೆದಿದೆ.

 
ಈ ಘಟನೆ ಆಕೆಯ ಪತಿ ಕೆಲಸಕ್ಕೆ ಹೋಗಿದ್ದ ವೇಳೆ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಈ ಕುರಿತಂತೆ ಸಂತ್ರಸ್ತೆ ಆರೋಪಿ ವಿರುದ್ಧ ಸೋಲಾ ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. 


ಬೆಳಗ್ಗೆ 8.30ರ ಸುಮಾರಿಗೆ ತನ್ನ ಮನೆಯ ಬಾಲ್ಕನಿಯಲ್ಲಿ ಕುಳಿತುಕೊಂಡಿದ್ದ ವೇಳೆ ಆರೋಪಿ ಸಾಹಿಲ್ ಠಾಕೋರ್ ತಿರುಗಾಡುತ್ತಿರುವುದನ್ನು ಸಂತ್ರಸ್ತೆ ಗಮನಿಸಿದ್ದಾರೆ. ನಂತರ ಆತ ತನ್ನತ್ತ ನೋಡಲು ಆರಂಭಿಸಿ, ಅಹಿತಕರ ಮತ್ತು ಅಶ್ಲೀಲ ಸನ್ನೆಗಳನ್ನು ತೋರಿಸಿದ್ದಾನೆ.

 
ನಂತರ ಸಿಟ್ಟಿಗೆದ್ದ ಮಹಿಳೆ ಆತನ್ನನ್ನು ತನ್ನತ್ತ ನೋಡುವುದನ್ನು ನಿಲ್ಲಿಸಿ ಹೋಗುವಂತ ಹೇಳಿ ನೆರೆಹೊರೆಯವರನ್ನು ಕರೆಯುವುದಾಗಿ ಬೆದರಿಕೆಯೊಡ್ಡಿದ್ದಾಳೆ. ಆದರೆ ಇದಕ್ಕೂ ಹೆದರದ ವ್ಯಕ್ತಿ, ಬದಲಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments