Webdunia - Bharat's app for daily news and videos

Install App

ರಾಜ್ಯದ 17 ಜಿಲ್ಲೆಗಳಲ್ಲಿ ಜಲಕ್ಷಾಮ

Webdunia
ಶುಕ್ರವಾರ, 17 ಮಾರ್ಚ್ 2023 (19:48 IST)
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 17 ಜಿಲ್ಲೆಗಳು ತೀವ್ರವಾದ ನೀರಿನ ತೊಂದರೆ ಅನುಭವಿಸಲಿವೆ ಎಂದು ‍ಪರಿಸರ ನಿರ್ವಹಣೆ ಹಾಗೂ ನೀತಿ ಸಂಶೋಧನೆ ಸಂಸ್ಥೆ ಎಚ್ಚರಿಕೆ ನೀಡಿದೆ. ಸಂಶೋಧಕರು ಜಿಲ್ಲಾ ಮಟ್ಟದ ಸರ್ಕಾರಿ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದು, 20 ಅಂಶಗಳನ್ನು ಆಧಾರವಾಗಿಟ್ಟುಕೊಂಡು ಈ ವರದಿ ತಯಾರಿ ಮಾಡಿದ್ದಾರೆ. ಅಂತರ್ಜಲ ಲಭ್ಯತೆ, ಕಾಡು ಪ್ರದೇಶ, ಜನಸಾಂದ್ರತೆ, ದಿನ ಬಳಕೆಗೆ ನೀರಿನ ಬೇಡಿಕೆ, ಕೃಷಿ, ಜಾನುವಾರು ಹಾಗೂ ಕಾರ್ಖಾನೆ ಮುಂತಾದ ಅಂಶಗಳು ಹಾಗೂ ಸರಾಸರಿ ವಾರ್ಷಿಕ ಮಳೆ ಮತ್ತು ಹಲವು ದಶಕಗಳ ಉಷ್ಣಾಂಶಗಳನ್ನೆಲ್ಲ ಗಣನೆಗೆ ತೆಗೆದುಕೊಳ್ಳಲಾಗಿದೆ. ಭಾರೀ ಜಲಕ್ಷಾಮ ಎದುರಿಸಲಿರುವ ಜಿಲ್ಲೆಗಳ ಪೈಕಿ ಬೆಂಗಳೂರು ಗ್ರಾಮಾಂತರ ಮೊದಲ ಸ್ಥಾನದಲ್ಲಿದ್ದು ರಾಯಚೂರು. ಚಿಕ್ಕಬಳ್ಳಾಪುರ, ಕಲಬುರಗಿ, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ, ಬೀದರ್‌ ಹಾಗೂ ಬೆಳಗಾವಿ ಇದೆ. ಬೆಂಗಳೂರು 12ನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಕೋಲಾರ, ಬಾಗಲಕೋಟೆ, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ತುಮಕೂರು ಇವೆ. ಇವುಗಳು ಭಾರೀ ಪ್ರಮಾಣದ ಜಲಕ್ಷಾಮ ಎದುರಿಸಲಿವೆ. ನೀರಿನ ಕೊರತೆ ಕಡಿಮೆ ಅನುಭವಿಸುವ ಜಿಲ್ಲೆಗಳ ಪೈಕಿ ಉಡುಪಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಕ್ರಮವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments