ಜಡೀ ಮಳೆಯಿಂದ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ: ಉದ್ಯಾನ ಜಲಾವೃತ

Sampriya
ಶನಿವಾರ, 14 ಸೆಪ್ಟಂಬರ್ 2024 (14:00 IST)
Photo Courtesy X
ಆಗ್ರಾ:  ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರುತ್ತಿದ್ದು, ಆವರಣದಲ್ಲಿರುವ ಉದ್ಯಾನಕ್ಕೂ ನೀರು ನುಗ್ಗಿದೆ.

ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದೆ. ಆದರೆ, ಸ್ಮಾರಕಕ್ಕೆ ಯಾವುದೇ ಹಾನಿಯಾಗಿಲ್ಲ. ಡ್ರೋನ್ ಕ್ಯಾಮೆರಾ ಮೂಲಕ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಹಿರಿಯ ಅಧಿಕಾರಿ ರಾಜ್‌ಕುಮಾರ್ ಪಟೇಲ್ ತಿಳಿಸಿದ್ದಾರೆ.

ಗುರುವಾರ ಸಂಜೆ, 20 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಸ್ಮಾರಕದ ಉದ್ಯಾನ ಮಳೆ ನೀರಿನಲ್ಲಿ ಮುಳುಗಿದೆ. ಇದು ಪ್ರವಾಸಿಗರ ಗಮನ ಸೆಳೆದಿದ್ದು, ಹೆಚ್ಚಿನ ಜನ ತಾಜ್ ಮಹಲ್ ಗೆ ಭೇಟಿ ನೀಡಿ, ವಿಡಿಯೋ ಮಾಡಿದರು.

ತಾಜ್ ಮಹಲ್ ಆಗ್ರಾ ಮತ್ತು ಇಡೀ ರಾಷ್ಟ್ರದ ಹೆಮ್ಮೆಯಾಗಿದೆ. ಇದು ನೂರಾರು ಸ್ಥಳೀಯರಿಗೆ ಮತ್ತು ಪ್ರವಾಸೋದ್ಯಮದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗ ನೀಡಿ. ಈ ಸ್ಮಾರಕದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು ಎಂದು ಸರ್ಕಾರದ ಅನುಮೋದಿತ ಪ್ರವಾಸಿ ಮಾರ್ಗದರ್ಶಿ ಮೋನಿಕಾ ಶರ್ಮಾ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments