ಕರ್ನಾಟಕ ನೀಡಿದ 15 ಲಕ್ಷ ಪರಿಹಾರ ನಿರಾಕರಿಸಿದ ವಯನಾಡು ಆನೆ ದಾಳಿ ಸಂತ್ರಸ್ತ ಕುಟುಂಬ

Krishnaveni K
ಮಂಗಳವಾರ, 27 ಫೆಬ್ರವರಿ 2024 (14:57 IST)
Photo Courtesy: Twitter
ಬೆಂಗಳೂರು: ಇತ್ತೀಚೆಗೆ ಕೇರಳದ ವಯನಾಡಿನ ಆನೆ ದಾಳಿ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ 15 ಲಕ್ಷ ರೂ. ಪರಿಹಾರ ನೀಡಿದ್ದು ಭಾರೀ ಸುದ್ದಿಯಾಗಿತ್ತು. ಆದರೆ ಈಗ ವಯನಾಡಿನ ಸಂತ್ರಸ್ತ ಕುಟುಂಬ ಕರ್ನಾಟಕದ ಪರಿಹಾರ ಹಣವನ್ನು ತಿರಸ್ಕರಿಸಿದೆ.

ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡಿನಲ್ಲಿ ಕರ್ನಾಟಕ ಮೂಲದ ಆನೆಯ ದಾಳಿಗೆ ಸಿಲುಕಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಘಟನೆ ನಡೆದ ಬಳಿಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ರದ್ದುಗೊಳಿಸಿ ವಯನಾಡಿಗೆ ತೆರಳಿ ಕುಟುಂಬಸ್ಥರನ್ನು ಭೇಟಿ ಮಾಡಿದ್ದರು.

ಅದಾದ ಬಳಿಕ ರಾಹುಲ್ ಸೂಚನೆಯಂತೆ ಕರ್ನಾಟಕ ಸರ್ಕಾರ ಕೇರಳದಲ್ಲಿ ಮೃತಪಟ್ಟ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡಿತ್ತು. ಇದು ಬಿಜೆಪಿ ಸೇರಿದಂತೆ ವಿಪಕ್ಷಗಳ ಟೀಕೆಗೆ ಗುರಿಯಾಗಿತ್ತು. ನಮ್ಮ ತೆರಿಗೆ ಹಣವನ್ನು ನೆರೆ ರಾಜ್ಯದ ಸಂತ್ರಸ್ತರಿಗೆ ನೀಡುವ ಅಗತ್ಯವೇನಿತ್ತು. ಸರ್ಕಾರ ರಾಹುಲ್ ಗಾಂಧಿ ಹೇಳಿದ್ದಾರೆಂದು ನಮ್ಮ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದರು.

ಇದಕ್ಕೆ ಕಾಂಗ್ರೆಸ್ ನಾಯಕರು ಸಮರ್ಥನೆಯನ್ನೂ ಕೊಟ್ಟಿದ್ದರು. ಆದರೆ ಈಗ ಸಂತ್ರಸ್ತ ಕುಟುಂಬವೇ ಕರ್ನಾಟಕ ನೀಡಿದ ಪರಿಹಾರವನ್ನು ತಿರಸ್ಕರಿಸಿದೆ. ಆದರೆ ಈಗ ಕರ್ನಾಟಕ ಪರಿಹಾರ ನೀಡಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾದ ಹಿನ್ನಲೆಯಲ್ಲಿ ಸಂತ್ರಸ್ತ ಕುಟುಂಬದವರೇ ಪರಿಹಾರ ಸ್ವೀಕರಿಸದೇ ಇರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments