Webdunia - Bharat's app for daily news and videos

Install App

ಕರುಣಾಜನಕವಾಗಿದೆ ವಯನಾಡು ಚಿತ್ರಣ: ರಾಹುಲ್ ಗಾಂಧಿ ಬೇಸರ

Sampriya
ಗುರುವಾರ, 1 ಆಗಸ್ಟ್ 2024 (19:40 IST)
Photo Courtesy X
ಕೇರಳ: ಭೀಕರ ಭೂಕುಸಿತಕ್ಕೆ ತತ್ತರಿಸಿ ಹೋಗಿರುವ ವಯನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಮ್ಮವರನ್ನು ಕಳೆದುಕೊಂಡವರು ನೋವು ಕರುಣಾಜನಕವಾಗಿದೆ ಎಂದರು.

ಸಹೋದರು ಪ್ರಿಯಾಂಕ ಗಾಂಧಿ ಜತೆಗೆ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಪ್ರವಾಹ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿದರು.

ನಂತರ ಮಾಧ್ಯಮದ ಜತೆ ಮಾತನಾಡಿದ ಅವರು, ಇಡೀ ದೇಶದಲ್ಲೇ ಅತ್ಯಂತ ಭೀಕರ ದುರಂತ ಇದಾಗಿದೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿದ್ದೇವೆ. ಹಲವರು ತಮ್ಮ ಕುಟುಂಬದ ಸದಸ್ಯರನ್ನು, ಹಲವರು ತಮ್ಮ ಮನೆಗಳನ್ನು ಕಳೆದುಕೊಂಡು ಸಂಕಟಪಡುತ್ತಿರುವ ದೃಶ್ಯಗಳು ಅತ್ಯಂತ ಕರುಣಾಜನಕವಾಗಿವೆ ಎಂದರು.

ಸಂತ್ರಸ್ತರಿಗೆ ಅಗತ್ಯ ಸಹಾಯ ಮಾಡುವ ಎಲ್ಲ ಪ್ರಯತ್ನ ಮಾಡುತ್ತೇವೆ, ಬದುಕುಳಿದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಇಲ್ಲಿಯ ಸರ್ಕಾರ ಕ್ರಮಕೈಗೊಳ್ಳುವ ಭರವಸೆ ಇದೆ. ಇನ್ನೂ ಬಹಳಷ್ಟು ಕೆಲಸಗಳು ಆಗಬೇಕಿವೆ.

ಭೂ ಕುಸಿತದಂತಹ ಸಂದರ್ಭದಲ್ಲಿ ವಾಯನಾಡಿನ ಜನರು ಹಾಗೂ ಪ್ರಾಣಿಗಳ ಜೀವ ರಕ್ಷಣೆ ಹಾಗೂ ಬದುಕುಳಿದವರ ಆರೈಕೆ ಮಾಡಿದ ವೈದ್ಯರು, ನರ್ಸ್‌ಗಳು, ಆಡಳಿತ ವರ್ಗ ಮತ್ತು ಸ್ವಯಂಸೇವಕರು ಸೇರಿದಂತೆ ಸಂಕಷ್ಟಕ್ಕೆ ಸ್ಪಂದಿಸಿದ ಎಲ್ಲರಿಗೂ ನನ್ನ ಧನ್ಯವಾದಗಳನ್ನು ಸಲ್ಲಿಸಿದರು. .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments