Webdunia - Bharat's app for daily news and videos

Install App

ವಯನಾಡು ಭೂಕುಸಿತ: ಚಾಲಿಯಾರ್ ನದಿಯಲ್ಲಿ ದೇಹದ ಭಾಗಗಳು ಪತ್ತೆ

Sampriya
ಮಂಗಳವಾರ, 30 ಜುಲೈ 2024 (17:55 IST)
Photo Courtesy X
ಕೇರಳ: ಭಾರೀ ಮಳೆಯಿಂದಾಗಿ ವಯನಾಡಿನಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದಾಗಿ ಕನಿಷ್ಠ 93 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಮಂಗಳವಾರ ರಾತ್ರಿ 2ರಿಂದ 4ಗಂಟೆಗೆ ವಯನಾಡು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಆದರೆ ಭಾರೀ ಮಳೆ ಮತ್ತು ನಿರ್ಣಾಯಕ ಸೇತುವೆಯ ಕುಸಿತದಿಂದ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನೂ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.  2018 ರ ನಂತರ ಕೇರಳದಲ್ಲಿ ಸಂಭವಿಸಿದ ಅತ್ಯಂತ ಭೀಕರ ಭೂಕುಸಿತ ಎನ್ನಲಾಗಿದೆ. ಶೋಧ ಮತ್ತು ರಕ್ಷಣಾ ಪ್ರಯತ್ನಗಳಲ್ಲಿ ಭದ್ರತಾ ಪಡೆಗಳಿಗೆ ಸಹಾಯ ಮಾಡಲು 200 ಕ್ಕೂ ಹೆಚ್ಚು ಸೇನಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಆಸ್ಪತ್ರೆಗಳು ಕನಿಷ್ಠ 129 ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿವೆ ಮತ್ತು ಇದುವರೆಗೆ ಸುಮಾರು 250 ಜನರನ್ನು ರಕ್ಷಿಸಲಾಗಿದೆ ಮತ್ತು ರಕ್ಷಣಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ವಯನಾಡಿನಲ್ಲಿ 65 ದೃಢೀಕೃತ ಸಾವುಗಳ ಹೊರತಾಗಿ, ನೆರೆಯ ಮಲಪ್ಪುರಂ ಜಿಲ್ಲೆಗೆ ಹರಿಯುವ ಚಾಲಿಯಾರ್ ನದಿಯಲ್ಲಿ 16 ಮೃತದೇಹಗಳು ಪತ್ತೆಯಾಗಿವೆ. ಇನ್ನು ಕೆಲವರ ದೇಹದ ಭಾಗಗಳೂ ಪತ್ತೆಯಾಗಿವೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments