Webdunia - Bharat's app for daily news and videos

Install App

ವಯನಾಡಿನ ಅನಾಥ ಕಂದಮ್ಮಗಳಿಗೆ ಎದೆಹಾಲು ನೀಡಲು ಮುಂದಾದ ಮಹಿಳೆಗೆ ಇದೆಂಥಾ ಕಾಮೆಂಟ್

Krishnaveni K
ಸೋಮವಾರ, 5 ಆಗಸ್ಟ್ 2024 (13:34 IST)
Photo Credit: Facebook
ವಯನಾಡು: ಗುಡ್ಡ ಕುಸಿತದಿಂದಾಗಿ ವಯನಾಡಿನಲ್ಲಿ ತಾಯಂದಿರನ್ನು ಕಳೆದುಕೊಂಡ ಎಳೆಕಂದಮ್ಮಗಳಿಗೆ ಹಾಲುಣಿಸಲು ಮುಂದೆ ಬಂದ ತಾಯಿಯೊಬ್ಬಳಿಗೆ ಸೋಷಿಯಲ್ ಮೀಡಿಯಾದಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಕಾಮೆಂಟ್ ಗಳನ್ನು ಮಾಡಲಾಗಿದೆ.

ವಯನಾಡಿನಲ್ಲಿ ತಮ್ಮ ತಾಯಂದಿರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತನ್ನ ಎದೆಹಾಲನ್ನೇ ನೀಡಲು ರೆಡಿ ಎಂದು ಇಡುಕ್ಕಿಯ ಎರಡು ಮಕ್ಕಳ ತಾಯಿ ಭಾವನಾ ಎಂಬವರು ಮುಂದೆ ಬಂದಿದ್ದರು. ಇದಕ್ಕೆ ಆಕೆಯ ಪತಿ ಸಾಜಿನ್ ಕೂಡಾ ಸಾಥ್ ನೀಡಿದ್ದಾರೆ. ಸಾಜಿನ್ ತಮ್ಮ ಮೊಬೈಲ್ ನಂಬರ್ ನ್ನು ಪ್ರಕಟಿಸಿ, ಅಗತ್ಯವಿರುವವರು ಸಂಪರ್ಕಿಸಲು ಕರೆ ನೀಡಿದ್ದರು.

ಒಂದೊಳ್ಳೆಯ ಉದ್ದೇಶದಿಂದ ಅವರು ಈ ರೀತಿ ಮಾಡಿದ್ದರು. ಆದರೆ ಅವರ ಉದ್ದೇಶವನ್ನೇ ಎಲ್ಲರೂ ದುರುಪಯೋಗಪಡಿಸಿಕೊಂಡಿದ್ದಾರೆ. ಮೊದಲು ಅವರಿಗೆ ಮಧ್ಯರಾತ್ರಿಯಲ್ಲಿ ಯಾರೋ ಕರೆ ಮಾಡಿ ಅರ್ಜೆಂಟಾಗಿ ಇಬ್ಬರಿಗೆ ಎದೆ ಹಾಲು ಬೇಕಾಗಿದೆ ಎಂದು ಕರೆ ಮಾಡಿ ವಂಚಿಸಿದ್ದರು.

ಇದು ಇಷ್ಟಕ್ಕೇ ನಿಂತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಭಾವನಾ ಪತಿ ಸಾಜಿನ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದ್ದಾರೆ. ‘ನಿಮ್ಮ ಹೆಂಡತಿ ಏನು ಜೆರ್ಸಿ ದನವೇ? ಎಷ್ಟು ಲೀಟರ್ ಹಾಲು ಕೊಡ್ತಾಳೆ’ ಎಂದೆಲ್ಲಾ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದಾರೆ. ಫೇಸ್ ಬುಕ್ ನಲ್ಲಿ ತಮಗೆ ಇಷ್ಟೊಂದು ಕೆಟ್ಟ ಕಾಮೆಂಟ್ ಬರುತ್ತಿದ್ದರೂ ಇದಕ್ಕೆ ತಲೆಯೇ ಕೆಡಿಸಿಕೊಳ್ಳದ ದಂಪತಿ ತಮ್ಮ ಒಳ್ಳೆಯ ಉದ್ದೇಶವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments