Webdunia - Bharat's app for daily news and videos

Install App

ವಯನಾಡು ದುರಂತ: ಶೋಧ ಕಾರ್ಯ ಅಂತಿಮ ಘಟ್ಟ ತಲುಪಿದರು ಇನ್ನೂ 250 ಮಂದಿ ನಾಪತ್ತೆ

Sampriya
ಶನಿವಾರ, 3 ಆಗಸ್ಟ್ 2024 (19:11 IST)
Photo Courtesy X
ಕೇರಳ: ವಯನಾಡಿನಲ್ಲಿ ಸಂಭವಿಸಿದ ಭೀಕರ  ಭೂಕುಸಿತದಲ್ಲಿ ರಕ್ಷಣೆ ಮತ್ತು ಶೋಧ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದ್ದು, ಇನ್ನೂ 250 ಮಂದಿ ನಾಪತ್ತೆಯಾಗಿದ್ದಾರೆ.

ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯದಲ್ಲಿ ಬದುಕುಳಿದವರ ರಕ್ಷಣೆಗೆ ಮತ್ತು ಅವಶೇಷಗಳಡಿ ಹೂತು ಹೋಗಿರುವ ದೇಹಗಳನ್ನು ಪತ್ತೆ ಹಚ್ಚಲು  ಸುಧಾರಿತ ತಾಂತ್ರಿಕ ಗ್ಯಾಜೆಟ್‌ಗಳು ಮತ್ತು ಶ್ವಾನಗಳನ್ನು ಬಳಸಿ ಶೋಧ ಕಾರ್ಯ ನಡೆಸಲಾಯಿತು.

ಈ ಭೀಕರ ಭೂಕುಸಿತದಲ್ಲಿ 350 ಮಂದಿ ಸಾವನ್ನಪ್ಪಿದ್ದು, ಇನ್ನೂ 250ಮಂದಿ ಕಣ್ಮರೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ವಯನಾಡಿನಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಇನ್ನೂ ಚಾಲಿಯಾರ್ ನದಿಯಿಂದ ಪತ್ತೆಯಾದ ಮೃತ ದೇಹಗಳು ಮತ್ತು ಕೆಲ ಭಾಗಗಳನ್ನು ಗುರುತಿಸಲು ಕಷ್ಟವಾಗುತ್ತಿದೆ ಎಂದರು. .

ಕೆ -9 ಸ್ಕ್ವಾಡ್‌ಗಳು ಮತ್ತು ತಮಿಳುನಾಡು ವೈದ್ಯಕೀಯ ತಂಡವೂ ಭಾಗವಹಿಸುತ್ತಿದೆ, ಹ್ಯೂಮನ್ ರೆಸ್ಕ್ಯೂ ರಾಡಾರ್ ಮತ್ತು ಡ್ರೋನ್ ಆಧಾರಿತ ರಾಡಾರ್‌ನಂತಹ ಸುಧಾರಿತ ಸಾಧನಗಳನ್ನು ಸಹ ಬಳಸಲಾಗುತ್ತಿದೆ ಎಂದು ವಿಜಯನ್ ಹೇಳಿದರು.

ಇದುವರೆಗೆ 341 ಶವಪರೀಕ್ಷೆ ಪೂರ್ಣಗೊಂಡಿದ್ದು, 148 ಮೃತದೇಹಗಳನ್ನು ಗುರುತಿಸಿ ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ 67 ಶವಗಳ ಗುರುತು ಪತ್ತೆಯಾಗದಿರುವುದರಿಂದ ಪಂಚಾಯಿತಿಗಳು ಅಂತಿಮ ವಿಧಿವಿಧಾನ ನಡೆಸಲಿವೆ ಎಂದರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments