Webdunia - Bharat's app for daily news and videos

Install App

ಗಾಂಧೀಜಿ ದೃಷ್ಟಿಕೋನದಿಂದ ದೇಶ ದೂರ: ಹಜಾರೆಯಿಂದ ಸತ್ಯಾಗೃಹದ ಎಚ್ಚರಿಕೆ

Webdunia
ಸೋಮವಾರ, 2 ಅಕ್ಟೋಬರ್ 2017 (12:08 IST)
ಗಾಂಧೀಜಿಯ ದೃಷ್ಟಿಕೋನದಿಂದ ದೇಶವು ದೂರ ಹೋಗುತ್ತಿದೆ. ಗಾಂಧಿಯವರ ತತ್ವ, ಸಿದ್ದಾಂತಗಳಿಗೆ ಸರಕಾರ ತಿಲಾಂಜಲಿ ನೀಡಿದೆ ಎಂದು ಆರೋಪಿಸಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಇಂದು ರಾಜ್‌ಘಾಟ್‌ನಲ್ಲಿ ಒಂದು ದಿನದ ಸಾಂಕೇತಿಕ ನಿರಶನ ಹಮ್ಮಿಕೊಂಡಿದ್ದಾರೆ.  
ಗಾಂಧಿ ಜಯಂತಿ ಸಂದರ್ಭದಲ್ಲಿ ಮಹಾತ್ಮಾ ಗಾಂಧಿಯವರಿಗೆ ಗೌರವ ಸಲ್ಲಿಸಿದ ನಂತರ ಹಿರಿಯ ಗಾಂಧಿವಾದಿ ಹಜಾರೆ, ಒಂದು ದಿನದ ನಿರಶನ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ,
 
"ಇಂದು ಅಕ್ಟೋಬರ್ 2, ಗಾಂಧಿ ಜಯಂತಿ ನಮ್ಮ ದೇಶವು ಸ್ವಾತಂತ್ರ್ಯ ಪಡೆದು 70 ವರ್ಷಗಳಾಗಿವೆ, ಆದರೆ, ಗಾಂಧಿಯವರು ನಮ್ಮ ದೇಶದ ಬಗ್ಗೆ ಕಂಡಿದ್ದ ಕನಸಿನಿಂದ ನಾವು ದೂರ ಹೋಗಿದ್ದೇವೆ, ಆದ್ದರಿಂದ, ನಾನು ಗಾಂಧೀಜಿಯವರ ಸಮಾಧಿಯ ಬಳಿ ನನ್ನ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದೇನೆ ಎಂದು ಹಜಾರೆ ತಿಳಿಸಿದ್ದಾರೆ.
 
ಸಾಂಕೇತಿಕ ನಿರಶನದ ನಂತರ ಭಾರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು.ಪ್ರಧಾನಿ ಮೋದಿಯವರಿಗೆ 30 ಪತ್ರಗಳನ್ನು ಬರೆದಿದ್ದೇನೆ. ಆದರೆ. ಇಲ್ಲಿಯವರೆಗೆ ಒಂದೇ ಒಂದು ಪತ್ರಕ್ಕೆ ಉತ್ತರ ದೊರೆತಿಲ್ಲ. ಪ್ರತಿಭಟನೆ ಆರಂಭಿಸಿದ ಸಂದರ್ಭದಲ್ಲಿ ಸರಕಾರದ ಮುಂದೆ ಹಲವು ವಿಷಯಗಳನ್ನು ಮುಂದಿಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಲ್ಲಿ ತಿಳಿಸಿದ್ದಾರೆ.   
 
ಲೋಕಪಾಲನ್ನು ಜಾರಿಗೆ ತರಲು ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments