Webdunia - Bharat's app for daily news and videos

Install App

ಗಾಂಧೀಜಿ ದೃಷ್ಟಿಕೋನದಿಂದ ದೇಶ ದೂರ: ಹಜಾರೆಯಿಂದ ಸತ್ಯಾಗೃಹದ ಎಚ್ಚರಿಕೆ

Webdunia
ಸೋಮವಾರ, 2 ಅಕ್ಟೋಬರ್ 2017 (12:08 IST)
ಗಾಂಧೀಜಿಯ ದೃಷ್ಟಿಕೋನದಿಂದ ದೇಶವು ದೂರ ಹೋಗುತ್ತಿದೆ. ಗಾಂಧಿಯವರ ತತ್ವ, ಸಿದ್ದಾಂತಗಳಿಗೆ ಸರಕಾರ ತಿಲಾಂಜಲಿ ನೀಡಿದೆ ಎಂದು ಆರೋಪಿಸಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಇಂದು ರಾಜ್‌ಘಾಟ್‌ನಲ್ಲಿ ಒಂದು ದಿನದ ಸಾಂಕೇತಿಕ ನಿರಶನ ಹಮ್ಮಿಕೊಂಡಿದ್ದಾರೆ.  
ಗಾಂಧಿ ಜಯಂತಿ ಸಂದರ್ಭದಲ್ಲಿ ಮಹಾತ್ಮಾ ಗಾಂಧಿಯವರಿಗೆ ಗೌರವ ಸಲ್ಲಿಸಿದ ನಂತರ ಹಿರಿಯ ಗಾಂಧಿವಾದಿ ಹಜಾರೆ, ಒಂದು ದಿನದ ನಿರಶನ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ,
 
"ಇಂದು ಅಕ್ಟೋಬರ್ 2, ಗಾಂಧಿ ಜಯಂತಿ ನಮ್ಮ ದೇಶವು ಸ್ವಾತಂತ್ರ್ಯ ಪಡೆದು 70 ವರ್ಷಗಳಾಗಿವೆ, ಆದರೆ, ಗಾಂಧಿಯವರು ನಮ್ಮ ದೇಶದ ಬಗ್ಗೆ ಕಂಡಿದ್ದ ಕನಸಿನಿಂದ ನಾವು ದೂರ ಹೋಗಿದ್ದೇವೆ, ಆದ್ದರಿಂದ, ನಾನು ಗಾಂಧೀಜಿಯವರ ಸಮಾಧಿಯ ಬಳಿ ನನ್ನ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದೇನೆ ಎಂದು ಹಜಾರೆ ತಿಳಿಸಿದ್ದಾರೆ.
 
ಸಾಂಕೇತಿಕ ನಿರಶನದ ನಂತರ ಭಾರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು.ಪ್ರಧಾನಿ ಮೋದಿಯವರಿಗೆ 30 ಪತ್ರಗಳನ್ನು ಬರೆದಿದ್ದೇನೆ. ಆದರೆ. ಇಲ್ಲಿಯವರೆಗೆ ಒಂದೇ ಒಂದು ಪತ್ರಕ್ಕೆ ಉತ್ತರ ದೊರೆತಿಲ್ಲ. ಪ್ರತಿಭಟನೆ ಆರಂಭಿಸಿದ ಸಂದರ್ಭದಲ್ಲಿ ಸರಕಾರದ ಮುಂದೆ ಹಲವು ವಿಷಯಗಳನ್ನು ಮುಂದಿಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಲ್ಲಿ ತಿಳಿಸಿದ್ದಾರೆ.   
 
ಲೋಕಪಾಲನ್ನು ಜಾರಿಗೆ ತರಲು ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments