Webdunia - Bharat's app for daily news and videos

Install App

ಏನು ಮಾಡಿದರೂ ನಾವು ಹೆದರುವುದಿಲ್ಲ : ರಾಹುಲ್ ಗಾಂಧಿ

Webdunia
ಗುರುವಾರ, 4 ಆಗಸ್ಟ್ 2022 (14:17 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ಅವರು ಏನ್ ಬೇಕಾದರೂ ಮಾಡಿಕೊಳ್ಳಲಿ. ನಾವು ದೇಶದ, ಸಂವಿಧಾನದ ರಕ್ಷಣೆಗೆ ಹೋರಾಟ ಮುಂದುವರಿಸುತ್ತೇವೆ.

ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡುವ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಅವರು, ಇದು ಸಂಪೂರ್ಣ ಬೆದರಿಕೆಯ ಪ್ರಯತ್ನವಾಗಿದೆ. ಸ್ವಲ್ಪ ಒತ್ತಡ ಹಾಕಿದರೆ ಅವರು ನಮ್ಮನ್ನು ಮೌನಗೊಳಿಸಬಹುದು ಎಂದು ಅವರು ಭಾವಿಸುತ್ತಾರೆ. ಆದರೆ ನಾವು ಸುಮ್ಮನಿರುವುದಿಲ್ಲ.

ನರೇಂದ್ರ ಮೋದಿ, ಅಮಿತ್ ಶಾ ಈ ದೇಶದಲ್ಲಿ ಏನು ಮಾಡುತ್ತಿದ್ದಾರೆ, ಪ್ರಜಾಪ್ರಭುತ್ವದ ವಿರುದ್ಧ ಹೇಗೆ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಬಹಿರಂಗಗೊಳಿಸುತ್ತೇವೆ ಎಂದರು.

ಓಡಿ ಹೋಗಲು ಬಿಡುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಓಡಿ ಹೋಗುವ ಬಗ್ಗೆ ಮಾತನಾಡುವವರು ಯಾರು? ಅವರು ಓಡಿ ಹೋಗುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ನಾವು ಓಡಿ ಹೋಗುವ ಪ್ರಶ್ನೆಯೇ ಇಲ್ಲ. ಓಡಿ ಹೋಗುತ್ತಿರುವುದು ಬಿಜೆಪಿ ನಾಯಕರು. ಸತ್ಯಕ್ಕೆ ಅಡ್ಡಗಾಲು ಹಾಕಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments