Webdunia - Bharat's app for daily news and videos

Install App

"ನಾವು ಯಾವುದೇ ಸಮುದಾಯದ ವಿರುದ್ಧವಲ್ಲ" ಎಂದ ಸುಪ್ರೀಂ

Webdunia
ಗುರುವಾರ, 28 ಅಕ್ಟೋಬರ್ 2021 (19:13 IST)
ಹೊಸದಿಲ್ಲಿ : ಪಟಾಕಿಗಳನ್ನು ನಿಷೇಧಿಸುವ ಮೂಲಕ ತಾನು ಯಾವುದೇ ನಿರ್ದಿಷ್ಟ ಗುಂಪು ಅಥವಾ ಸಮುದಾಯದ ವಿರುದ್ಧವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಸ್ಫಷ್ಟಪಡಿಸಿದೆಯಲ್ಲದೆ.
ಖುಷಿ ಪಡುವ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಯನ್ನು ತಾನು ಅನುಮತಿಸುವ ಹಾಗಿಲ್ಲ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ಆದೇಶ ಪೂರ್ಣವಾಗಿ ಜಾರಿಗೊಳ್ಳಬೇಕು ಎಂದು ನ್ಯಾಯಮೂರ್ತಿಗಳಾದ ಎಂ ಆರ್ ಶಾ ಹಾಗೂ ಎ ಎಸ್ ಬೋಪಣ್ಣ ಅವರ ಪೀಠ ಹೇಳಿದೆ.
"ನೀವು ಜನರಿಗೆ ಖುಷಿ ನೀಡುತ್ತದೆ ಎಂದು ಹೇಳಿಕೊಂಡು ಜನರ ಜೀವನದೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ಸಮುದಾಯದ ವಿರುದ್ಧವಲ್ಲ. ನಾವು ಇಲ್ಲಿ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಿದ್ದೇವೆ ಎಂಬ ಪ್ರಬಲ ಸಂದೇಶವನ್ನು ನಾವು ನೀಡಲು ಬಯಸಿದ್ದೇವೆ" ಎಂದು ನ್ಯಾಯಾಲಯ ಹೇಳಿದೆ.
"ನಾವೇನೂ ಪಟಾಕಿಗಳ ಮೇಲೆ ಶೇ 100 ನಿಷೇಧ ಹೇರಿಲ್ಲ. ದಿಲ್ಲಿಯಲ್ಲಿ ಪಟಾಕಿಗಳಿಂದ ಉಂಟಾಗುತ್ತಿರುವ ಮಾಲಿನ್ಯದಿಂದ ಜನರು ನರಳುತ್ತಿದ್ದಾರೆಂದು ಎಲ್ಲರಿಗೂ ಗೊತ್ತು" ಎಂದು ನ್ಯಾಯಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments