Webdunia - Bharat's app for daily news and videos

Install App

ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದಿಂಚೂ ಭೂಮಿ ನೀಡಲ್ಲ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು-ನಿತಿನ್ ಗಡ್ಕರಿ

Webdunia
ಶುಕ್ರವಾರ, 12 ಜನವರಿ 2018 (16:16 IST)
ಮುಂಬೈ: ದಕ್ಷಿಣ ಮುಂಬೈನಲ್ಲಿ ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅವರು ಹೀಗೆ ಹೇಳುವುದಕ್ಕೆ ಕಾರಣವೂ ಇದೆಯಂತೆ. ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರುವ ನೌಕಾಪಡೆಯ ಸಿಬ್ಬಂದಿಯೂ ದಕ್ಷಿಣ ಮುಂಬೈನಲ್ಲಿ ನೆಲೆಸಲು ಬಯಸುತ್ತಿದ್ದಾರೆ ಹಾಗಾಗಿ ನೌಕಪಡೆ ಸಿಬ್ಬಂದಿಗೆ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ. 


‘ಉಗ್ರರು ನುಸುಳುತ್ತಿರುವ ಗಡಿಯಲ್ಲಿ ನೌಕಾಪಡೆಯ ಅಗತ್ಯವಿದೆ. ನೌಕಾಪಡೆ ಸಿಬ್ಬಂದಿಯವರು ಯಾಕೆ ದಕ್ಷಿಣ ಮುಂಬೈನಲ್ಲಿ ನೆಲೆಸಲು ಬಯಸುತ್ತೀರಿ? ನೌಕಾಪಡೆಯವರು ಭೂಮಿ ನೀಡುವಂತೆ ಕೇಳುತ್ತಿದ್ದಾರೆ. ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ. ದಯವಿಟ್ಟು ನನ್ನ ಬಳಿಗೆ ಮತ್ತೆ ಬರಬೇಡಿ’ ಎಂದು ಗಡ್ಕರಿ ಖಡಾಖಂಡಿತವಾಗಿ ಹೇಳಿದ್ದಾರೆ.


ದಕ್ಷಿಣ ಮುಂಬೈನಲ್ಲಿ ಎಲ್ಲರೂ ವಸತಿಗೃಹಗಳು ಮತ್ತು ಫ್ಲಾಟ್‌ಗಳನ್ನು ನಿರ್ಮಿಸಲು ಇಚ್ಛಿಸುತ್ತಾರೆ. ನಾವು ನಿಮ್ಮನ್ನು(ನೌಕಾಪಡೆ) ಗೌರವಿಸುತ್ತೇವೆ. ಆದರೆ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು ಎಂದು ಗಡ್ಕರಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments