Webdunia - Bharat's app for daily news and videos

Install App

ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದಿಂಚೂ ಭೂಮಿ ನೀಡಲ್ಲ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು-ನಿತಿನ್ ಗಡ್ಕರಿ

Webdunia
ಶುಕ್ರವಾರ, 12 ಜನವರಿ 2018 (16:16 IST)
ಮುಂಬೈ: ದಕ್ಷಿಣ ಮುಂಬೈನಲ್ಲಿ ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅವರು ಹೀಗೆ ಹೇಳುವುದಕ್ಕೆ ಕಾರಣವೂ ಇದೆಯಂತೆ. ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರುವ ನೌಕಾಪಡೆಯ ಸಿಬ್ಬಂದಿಯೂ ದಕ್ಷಿಣ ಮುಂಬೈನಲ್ಲಿ ನೆಲೆಸಲು ಬಯಸುತ್ತಿದ್ದಾರೆ ಹಾಗಾಗಿ ನೌಕಪಡೆ ಸಿಬ್ಬಂದಿಗೆ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ. 


‘ಉಗ್ರರು ನುಸುಳುತ್ತಿರುವ ಗಡಿಯಲ್ಲಿ ನೌಕಾಪಡೆಯ ಅಗತ್ಯವಿದೆ. ನೌಕಾಪಡೆ ಸಿಬ್ಬಂದಿಯವರು ಯಾಕೆ ದಕ್ಷಿಣ ಮುಂಬೈನಲ್ಲಿ ನೆಲೆಸಲು ಬಯಸುತ್ತೀರಿ? ನೌಕಾಪಡೆಯವರು ಭೂಮಿ ನೀಡುವಂತೆ ಕೇಳುತ್ತಿದ್ದಾರೆ. ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ. ದಯವಿಟ್ಟು ನನ್ನ ಬಳಿಗೆ ಮತ್ತೆ ಬರಬೇಡಿ’ ಎಂದು ಗಡ್ಕರಿ ಖಡಾಖಂಡಿತವಾಗಿ ಹೇಳಿದ್ದಾರೆ.


ದಕ್ಷಿಣ ಮುಂಬೈನಲ್ಲಿ ಎಲ್ಲರೂ ವಸತಿಗೃಹಗಳು ಮತ್ತು ಫ್ಲಾಟ್‌ಗಳನ್ನು ನಿರ್ಮಿಸಲು ಇಚ್ಛಿಸುತ್ತಾರೆ. ನಾವು ನಿಮ್ಮನ್ನು(ನೌಕಾಪಡೆ) ಗೌರವಿಸುತ್ತೇವೆ. ಆದರೆ, ನೀವು ಪಾಕಿಸ್ತಾನದ ಗಡಿಗೆ ಹೋಗಿ ಗಸ್ತು ತಿರುಗಬೇಕು ಎಂದು ಗಡ್ಕರಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments