Webdunia - Bharat's app for daily news and videos

Install App

ಕೇಜ್ರಿವಾಲ್ ಸಲಹೆ ನಮಗೆ ಅಗತ್ಯವಿಲ್ಲ: ಪಂಜಾಬ್ ಸಚಿವ ಕಿಡಿ

Webdunia
ಗುರುವಾರ, 30 ಸೆಪ್ಟಂಬರ್ 2021 (12:51 IST)
ಚಂಡೀಗಢ : ಪಂಜಾಬ್ ನೂತನ ಸಚಿವ ಪರ್ಗತ್ ಸಿಂಗ್ ಅವರು ದೆಹಲಿ ಮುಖ್ಯಮಂತ್ರಿ ,ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಗುರುವಾರ ಕಿಡಿ ಕಾರಿದ್ದಾರೆ.
Photo Courtesy: Google

ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಛನ್ನಿ ಅವರು ಕಳಂಕಿತರು ಮತ್ತು ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ ಕೇಜ್ರಿವಾಲ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ , ‘ನಮಗೆ ಅವರ ಸಲಹೆಯ ಅಗತ್ಯವಿಲ್ಲ. ನಾವು ಪಂಜಾಬ್ನ ಒಳಿತನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮ ಹೋರಾಟವು ಅನೇಕ ಸಮಸ್ಯೆಗಳ ಕುರಿತಾಗಿ ಹೊರತು ಯಾವುದೇ ವ್ಯಕ್ತಿಯನ್ನು ಆಧರಿಸಿಲ್ಲ’ ಎಂದಿದ್ದಾರೆ.
ಪಂಜಾಬ್ ಗೆ ಆಗಮಿಸಿದ್ದ ಕೇಜ್ರಿವಾಲ್ ಅವರು ‘ಮುಖ್ಯಮಂತ್ರಿಯಾದ ಚರಣ್ ಜಿತ್ ಸಿಂಗ್ ಛನ್ನಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಆದರೆ ಅವರು ಕಳಂಕಿತರು ಮತ್ತು ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿರು, ಮಾತ್ರವಲ್ಲದೆ ಬರ್ಗಾರಿ ಗ್ರಾಮದಲ್ಲಿ ಸಿಖ್ ಪವಿತ್ರ ಗ್ರಂಥ ಅಪವಿತ್ರ ಗೊಳಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿ, 'ಪ್ರಕರಣದ ಮಾಸ್ಟರ್ ಮೈಂಡ್ ಯಾರು ಎನ್ನುವುದನ್ನು ನಾನೇನು ಹೇಳಬೇಕಾಗಿಲ್ಲ. ಇದುವರೆಗೆ ಅವನಿಗೆ ಯಾವುದೇ ಶಿಕ್ಷೆಯಾಗಿಲ್ಲ. ಛನ್ನಿ ಸಾಹೇಬರು ಕುನ್ವಾರ್ ವಿಜಯ್ ಪ್ರತಾಪ್ ಅವರ ವರದಿಯನ್ನು ಓದಲೇಬೇಕು. ಅಲ್ಲಿ ಅವರಿಗೆ ಆರೋಪಿಗಳ ಹೆಸರು ಸಿಗುತ್ತದೆ. 24 ಗಂಟೆಗಳ ಒಳಗೆ ಅವರನ್ನು ಬಂಧಿಸಲಿ' ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments