Webdunia - Bharat's app for daily news and videos

Install App

ಗೂಂಡಾ ವ್ಯಕ್ತಿಗಳಿಂದ ಪಕ್ಷವನ್ನು ಕಾಪಾಡಬೇಕಾಗಿದೆ: ಎಐಎಡಿಎಂಕೆ ಅಧ್ಯಕ್ಷ

Webdunia
ಗುರುವಾರ, 9 ಫೆಬ್ರವರಿ 2017 (14:10 IST)
ಗೂಂಡಾ ವ್ಯಕ್ತಿಗಳಿಂದ ಪಕ್ಷವನ್ನು ಕಾಪಾಡಬೇಕಾಗಿರುವುದರಿಂದ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ನೀಡುತ್ತಿದ್ದೇನೆ ಎಂದು ಎಐಎಡಿಎಂಕೆ ಅಧ್ಯಕ್ಷ ಮಧುಸೂದನ್ ಹೇಳಿದ್ದಾರೆ.
 
ನಗರದ ಗ್ರೀನ್‌ವೇಸ್‌ನಲ್ಲಿರುವ ಸಿಎಂ ಸೆಲ್ವಂ ನಿವಾಸಕ್ಕೆ ಭೇಟಿ ನೀಡಿದ ಮಧುಸೂಧನ, ಸಿಎಂ ಆಗಲು ಶಶಿಕಲಾ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸುತ್ತಿದ್ದಾರೆ. ಶಶಿಕಲಾರೊಂದಿಗೆ ಯಾವುದೇ ಸಂಪರ್ಕ ಇಟ್ಟುಕೊಳ್ಳದಂತೆ ದಿವಂಗತ ನಾಯಕಿ ಜಯಲಲಿತಾ ಸಲಹೆ ನೀಡಿದ್ದರು ಎಂದು ತಿಳಿಸಿದ್ದಾರೆ.
 
ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು ಇಂದು ಎಐಎಡಿಎಂಕೆ ಅಧ್ಯಕ್ಷ ಡಿ. ಮಧುಸೂಧನ್ ಸಿಎಂ ಸೆಲ್ವಂ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ.
 
ಜಯಲಲಿತಾ ಜೀಲಂತವಾಗಿದ್ದಾಗ ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ. ರಾಜಕೀಯಕ್ಕೆ ಬರುವುದಿಲ್ಲ ಎಂದು ಶಶಿಕಲಾ ಹೇಳಿಕೆ ನೀಡಿದ್ದರು. ಇದೀಗ ಜಯಲಲಿತ ನಿಧನದ ನಂತರ ರಾಜಕೀಯ ಲಾಭ ಪಡೆಯಲು ಕಳಪೆ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಶಶಿಕಲಾ ಸಿಎಂ ಆದ್ರೆ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾದಂತಾಗುತ್ತದೆ. ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತದೆ ಎಂದು ಸಿಎಂ ಪನ್ನೀರ್ ಸೆಲ್ವಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments