Select Your Language

Notifications

webdunia
webdunia
webdunia
webdunia

ಎಸ್.ಎಂ.ಕೃಷ್ಣರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಲಾಗುವುದು: ಅಮಿತ್ ಶಾ

ಎಸ್.ಎಂ.ಕೃಷ್ಣರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಲಾಗುವುದು: ಅಮಿತ್ ಶಾ
ನವದೆಹಲಿ , ಬುಧವಾರ, 22 ಮಾರ್ಚ್ 2017 (18:16 IST)
ಹಿರಿಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿರುವುದು ಸಂತಸದ ಸಂಗತಿಯಾಗಿದೆ. ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
 
ಕೃಷ್ಣ ಸುದೀರ್ಘ ರಾಜಕೀಯ ಜೀವನದಲ್ಲಿದ್ದವರು. ಇದೊಂದು ಬದಲಾವಣೆಯ ಪರ್ವವಾಗಿರುವುದರಿಂದ ಸಮಯೋಚಿತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶ್ಲಾಘಿಸಿದರು.
 
ಕಳೆದ ಮೂರು-ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ದೇಶದಲ್ಲಿ ಪರಿವರ್ತನೆಯ ಕಾಲ ಆರಂಭವಾಗಿದೆ. ಎಸ್‌ಎಂಕೃಷ್ಣ ರಾಜಕೀಯ ಆಸ್ತಿಯಿದ್ದಂತೆ. ಅವರು ಬೇರೇ ಬೇರೆ ಹುದ್ದೆಗಳನ್ನು ನಿಭಾಯಿಸಿ ಅನುಭವ ಹೊಂದಿದ್ದಾರೆ ಎಂದರು.
 
ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಕೃಷ್ಣ ಅವರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳುವುದರ ಜೊತೆಗೆ ಅವರ ಅನುಭವಗಳನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 
 
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ ಮತ್ತು ರಾಜ್ಯದ ಉಸ್ತುವಾರಿ ಹೊತ್ತಿರುವ ಮರುಳಿಧರ್ ರಾವ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ