Webdunia - Bharat's app for daily news and videos

Install App

ಗೋಮಾಂಸ ಭಕ್ಷ್ಯ ನೀಡದಿದ್ದರಿಂದ ವಿವಾಹ ರದ್ದುಗೊಳಿಸಿದ ವರ

Webdunia
ಭಾನುವಾರ, 18 ಜೂನ್ 2017 (15:33 IST)
ವಧುವಿನ ಕುಟುಂಬದವರ ವಿವಾಹದ ಭಕ್ಷ್ಯಗಳಲ್ಲಿ ಗೋಮಾಂಸವಿರದನ್ನು ಕಂಡು ವರನ ಕುಟುಂಬದವರು ವಿವಾಹವನ್ನೇ ರದ್ದುಗೊಳಿಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ರಾಮ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.
  
ವರದಿಯ ಪ್ರಕಾರ, ವರನ ಪೋಷಕರು ವಧುವಿನ ಕುಟುಂಬಕ್ಕೆ ವಿವಾಹ ಸಮಾರಂಭದಲ್ಲಿ ಗೋಮಾಂಸವನ್ನು ಸರಬರಾಜು ಮಾಡಬೇಕು ಎನ್ನುವ ಷರತ್ತು ಒಡ್ಡಿದ್ದರು ಎನ್ನಲಾಗಿದೆ. ಭೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ದರಿಯಾಘರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
 
ವಿವಾಹಕ್ಕಿಂತ ಕೆಲ ದಿಮಗಳ ಮುಂಚೆ ಅತಿಥಿಗಳಿಗೆ ಗೋಮಾಂಸ ಬಡಿಸಲು ಸಿದ್ದರಾಗಿ. ಇಲ್ಲವಾದಲ್ಲಿ ವಿವಾಹ ರದ್ದುಗೊಳ್ಳುವುದಕ್ಕೆ ಸಿದ್ದರಾಗಿ ಎಂದು ವರನ ಕಡೆಯವರು ವಧುವಿನ ಪೋಷಕರಿಗೆ ಷರತ್ತು ಒಡ್ಡಿದ್ದರು ಎನ್ನಲಾಗಿದೆ. 
 
ಗೋಮಾಂಸ ಭಕ್ಷ್ಯ ದೊರೆಯದಿರುವುದರಿಂದ ಆಕ್ರೋಶಗೊಂಡು ಯಾವುದೇ ಸಂಧಾನಕ್ಕೆ ಒಪ್ಪದ ವರನ ಕಡೆಯವರು, ಕೊನೆಗೆ ವಿವಾಹದ ವರದಕ್ಷಿಣೆಯಾಗಿ ಕಾರು ಉಡುಗೊರೆಯಾಗಿ ನೀಡುವಂತೆ ಒತ್ತಡ ಹೇರಿದ್ದಾರೆ.  
 
ವರನ ಕುಟುಂಬದವರು ಗೋಮಾಂಸ ಮತ್ತು ವರದಕ್ಷಿಣೆಯಾಗಿ ಕಾರು ನೀಡುವಂತೆ ಒತ್ತಾಯಿಸತೊಡಗಿದರು. ಕೇಂದ್ರ ಸರಕಾರ ಗೋಮಾಂಸ ನಿಷೇಧಿಸಿರುವುದರಿಂದ ಅದನ್ನು ನಾವು ಹೇಗೆ ಪೂರೈಸಬಲ್ಲೆವು? ಎಂದು ವಧುವಿನ ತಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  
 
ವಧುವಿನ ಪೋಷಕರು ಪೊಲೀಸ್ ಠಾಣೆಯಲ್ಲಿ ವರ ಮತ್ತು ಆತನ ಬಂಧುಗಳ ವಿರುದ್ಧ ದೂರು ದಾಖಲಿಸಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments