Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ವಾರಾಂತ್ಯ ಬೀಚ್, ದೇಗುಲ ಪ್ರವೇಶ ನಿರ್ಬಂಧ

Webdunia
ಮಂಗಳವಾರ, 31 ಆಗಸ್ಟ್ 2021 (12:06 IST)
ಚೆನ್ನೈ, ಆಗಸ್ಟ್ 31: ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಸಾರ್ವಜನಿಕರಿಗೆ ಭಾನುವಾರದಂದು ಬೀಚ್ಗಳಿಗೆ ಪ್ರವೇಶ ನಿರ್ಬಂಧಿಸಿರುವುದಾಗಿ ಘೋಷಿಸಿದ್ದು, ವಾರಾಂತ್ಯದಲ್ಲಿ ಪೂಜಾ ಸ್ಥಳಗಳಲ್ಲಿನ ನಿಷೇಧವನ್ನು ವಿಸ್ತರಿಸಿದೆ. ಧಾರ್ಮಿಕ ಉತ್ಸವಗಳ ಮೇಲೆ ನಿರ್ಬಂಧ ಹೇರಲಾಗಿದೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ 15, ಬೆಳಿಗ್ಗೆ 6ರವರೆಗೂ ಈ ನಿರ್ಬಂಧಗಳು ಜಾರಿಯಲ್ಲಿರುತ್ತದೆ ಎಂದು ಅಧೀಕೃತ ಪ್ರಕಟಣೆ ತಿಳಿಸಿದೆ.
'ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಕೊರೊನಾ ಹರಡುವಿಕೆ ನಿಯಂತ್ರಿಸಲು ಭಾನುವಾರ ಬೀಚ್ಗಳನ್ನು ಮುಚ್ಚಲಾಗುತ್ತದೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರಗಳಂದು ಪೂಜಾ ಸ್ಥಳಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗುವುದು. ಧಾರ್ಮಿಕ ಹಬ್ಬಗಳನ್ನು ನಡೆಸುವುದನ್ನು ಕೂಡ ನಿಷೇಧಿಸಲಾಗಿದೆ' ಎಂದು ಪ್ರಕಟಣೆ ತಿಳಿಸಿದೆ.
ಬೀಚ್ಗಳಲ್ಲಿ ಭಾರಿ ಜನಸಂದಣಿ ಸೇರಿ ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿರುವ ಚಿತ್ರಗಳು ವೈರಲ್ ಆದ ಬೆನ್ನಲ್ಲೇ ಬೀಚ್ಗಳಿಗೆ ಭಾನುವಾರದಂದು ನಿರ್ಬಂಧ ಹೇರಿ ಜನರ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಬಾರಿಯೂ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧಿಸಲು ಸರ್ಕಾರ ನಿರ್ಧರಿಸಿದ್ದು, ಕಳೆದ ವರ್ಷದಂತೆಯೇ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 10ರಂದು ಅದ್ಧೂರಿಯಾಗಿ ಆಚರಿಸದೇ ಇರಲು ನಿರ್ಧರಿಸಲಾಗಿದೆ. ಮೆರವಣಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದೇ ವೇಳೆ, ಸರ್ಕಾರ ಜಿಲ್ಲೆಗಳಲ್ಲಿ ವೈರಸ್ ಹರಡುವಿಕೆ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.
ಶಿಕ್ಷಣ ತಜ್ಞರ ಅಭಿಪ್ರಾಯಗಳನ್ನು ಆಧರಿಸಿ 9ರಿಂದ 12ನೇ ತರಗತಿವರೆಗೆ ಸೆಪ್ಟೆಂಬರ್ 1ರಿಂದ ಕಾಲೇಜುಗಳನ್ನು ತೆರೆಯುವ ತಮ್ಮ ಹಿಂದಿನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರದ ಪ್ರಕಟಣೆ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments