Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕಿ ಮನೆ ಮೇಲೆ ಬಾಂಬ್ ದಾಳಿ

West Bengal
ಕೋಲ್ಕತ್ತಾ , ಬುಧವಾರ, 4 ಜನವರಿ 2017 (14:02 IST)
ಪಶ್ಚಿಮ ಬಂಗಾಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಭಟ್ಟಾಚಾರ್ಯ ಅವರ ಮನೆ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಹೂಗ್ಲಿ ಜಿಲ್ಲೆಯ ಕೊಣ್ಣನ್ ನಗರದ ಜೋರಾಪುಕರ್ ಘಾಟ್‌ನಲ್ಲಿ ಅವರ ನಿವಾಸದ ಮೇಲೆ ನಿನ್ನೆ ರಾತ್ರಿ ಈ ದಾಳಿ ನಡೆದಿದ್ದು, ಇದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಕೃತ್ಯ ಎಂದು ಆರೋಪಿಸಲಾಗಿದೆ.
ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿಗಳು ಮೋಟಾರ್ ಸೈಕಲ್ ಮೇಲೆ ಬಂದು ಕೃಷ್ಣಾ ನಿವಾಸದ ಮೇಲೆ ಬಾಂಬ್ ಎಸೆದಿದ್ದಾರೆ. ಇದು ಟಿಎಂಸಿ ಪ್ರಚೋದಿತ ದಾಳಿ ಎಂದು ನಾಯಕಿ ಆರೋಪಿಸಿದ್ದಾರೆ.
 
ಬಿಜೆಪಿ ನಾಯಕಿ ಮಾಡಿರುವ ಆರೋಪವನ್ನು ಟಿಎಂಸಿ ನಾಯಕ ತಪನ್ ದಾಸ್‌ ಗುಪ್ತಾ ತಳ್ಳಿ ಹಾಕಿದ್ದು ತಮ್ಮ ಪಕ್ಷದ ಸದಸ್ಯರಿಗೂ ಈ ಘಟನೆಗೂ ಸಂಬಂಧವಿಲ್ಲ ಎಂದಿದ್ದಾರೆ. 
 
ಈ ಹಿಂದೆ ಕೋಲ್ಕತ್ತಾದಲ್ಲಿರುವ ಬಿಜೆಪಿ ಕಾರ್ಯಾಲಯದ ಮೇಲೆ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ಘಟಕ ದಾಳಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

Share this Story:

Follow Webdunia kannada

ಮುಂದಿನ ಸುದ್ದಿ

18 ವರ್ಷಗಳ ನಂತ್ರ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ಕತ್ತರಿ ಹೊರತೆಗೆದ ವೈದ್ಯರು