Publish Date: Mon, 04 May 2026 (14:08 IST)
Updated Date: Mon, 04 May 2026 (14:10 IST)
ನವದೆಹಲಿ: ಪಂಚ ರಾಜ್ಯ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿಯತ್ತ ಸಾಗಿದ್ದು ಇಂದು ಸಂಜೆ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಚುನಾವಣೆ ಬಿಜೆಪಿ ಮತ್ತು ಸ್ಥಳೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿತ್ತು. ಅಸ್ಸಾಂ, ಪುದುಚೇರಿ ಮತ್ತು ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ನಡುವೆ ಪಶ್ಚಿಮ ಬಂಗಾಲ ಗೆಲುವು ಬಿಜೆಪಿಗೆ ಚಾರಿತ್ರಿಕ ಗೆಲುವಾಗಿದೆ.
ಪಶ್ಚಿಮ ಬಂಗಾಲದಲ್ಲಿ ತನ್ನದೇ ಹಿಡಿತ ಸಾಧಿಸಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯನ್ನು ಸೋಲಿಸುವುದು ಸುಲಭದ ಮಾತಾಗಿರಲಿಲ್ಲ. ಆದರೆ ಈ ಬಾರಿ ಆಡಳಿತ ವಿರೋಧಿ ಅಲೆ, ಮತ ಪರಿಷ್ಕರಣೆ ಬಿಜೆಪಿ ಪರ ಕೆಲಸ ಮಾಡಿದೆ.
ಈ ಗೆಲುವು ಬಿಜೆಪಿಯ ಉತ್ಸಾಹ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು ಸಂಜೆ ಬಿಜೆಪಿ ಪ್ರಧಾನ ಕಚೇರಿಗೆ ಬಂದು ಭಾಷಣ ಮಾಡಲಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ