Webdunia - Bharat's app for daily news and videos

Install App

ಸಿಎಂ ಕೇಜ್ರಿವಾಲ್ ಮೇಲೆ ಖಾರದ ಪುಡಿ ಎರಚಿ ದಾಳಿ ಮಾಡುವ ಮೊದಲು ಆತ ಹೇಳಿದ್ದೇನು ಗೊತ್ತೇ?!

Webdunia
ಬುಧವಾರ, 21 ನವೆಂಬರ್ 2018 (08:32 IST)
ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ಸಚಿವಾಲಯದಲ್ಲೇ ಖಾರದ ಪುಡಿ ಎರಚಿದ ಆರೋಪಿ ಅದಕ್ಕೂ ಮೊದಲು ಹೇಳಿದ್ದೇನು ಗೊತ್ತೇ?

ನಿನ್ನೆ ಸಚಿವಾಲಯದಿಂದ ಊಟಕ್ಕೆ ತೆರಳುವಾಗ ಸಿಎಂ ಕೇಜ್ರಿವಾಲ್ ಮೇಲೆ ಆಗಂತುಕನೊಬ್ಬ ಖಾರದ ಪುಡಿ ಎರಚಿ ದಾಳಿ ಮಾಡಿದ್ದ. ಆರೋಪಿಯನ್ನು ದೆಹಲಿ ನಿವಾಸಿ ಅನಿಲ್ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದ್ದು, ಈತನನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆದರೆ ದಾಳಿಗೆ ಮೊದಲು ಈತ ಒಂದು ಗುಟ್ಕಾ ಪ್ಯಾಕೆಟ್ ನಲ್ಲಿ ಖಾರದ ಪುಡಿ ತುಂಬಿ ತಂದಿದ್ದ. ಅದನ್ನು ಒಂದು ಕೈಯಲ್ಲಿ ಹಿಡಿದು ಇನ್ನೊಂದು ಕೈಯಲ್ಲಿ ಸಿಎಂ ಕೇಜ್ರಿವಾಲ್‍ ಕಾಲು ಮುಟ್ಟಿ ನಮಸ್ಕರಿಸಲು ಹೋಗಿದ್ದ. ಅಲ್ಲದೆ, ನೀವೇ ನನ್ನ ಕೊನೆಯ ಭರವಸೆ ಎನ್ನುತ್ತಾ ನಮಸ್ಕರಿಸಲು ಹೋದಾಗ ಕೇಜ್ರಿವಾಲ್ ಆತನನ್ನು ಮೇಲೆತ್ತಲು ಪ್ರಯತ್ನಿಸಿದ್ದರು. ಈ ವೇಳೆ ಆತ ಖಾರದ ಪುಡಿ ಎರಚಿದ್ದ ಎನ್ನಲಾಗಿದೆ. ಆದರೆ ಇದೊಂದು ಗಂಭೀರ ಭದ್ರತಾ ಲೋಪ ಪ್ರಕರಣ ಎಂದು ಆಮ್ ಆದ್ಮಿ ಪಕ್ಷ ಬಣ್ಣಿಸಿದೆ. ಒಂದು ವೇಳೆ ಖಾರದ ಪುಡಿ ಬದಲು ಆತನ ಬಳಿ ಮಾರಕ ಆಯುಧಗಳಿದ್ದರೆ ಯಾರು ಜವಾಬ್ಧಾರಿಯಾಗುತ್ತಿದ್ದರು ಎಂದು ಎಎಪಿ ವಕ್ತಾರರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

Karnataka Weather: ಇಂದು ಮಳೆಯ ಅಬ್ಬರವಿರಲಿದೆಯಾ ಇಲ್ಲಿದೆ ಹವಾಮಾನ ವರದಿ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments