Select Your Language

Notifications

webdunia
webdunia
webdunia
webdunia

ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದ ಕಾರಣವಾದ್ರು ಏನು?

ರಾಜ್ಯಸಭೆ
ಲಕ್ನೋ , ಬುಧವಾರ, 25 ಮೇ 2022 (14:02 IST)
ಲಕ್ನೋ : ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತವಾಗಿದ್ದು, ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವುದಾಗಿ ಇಂದು ಬಹಿರಂಗಪಡಿಸಿದ್ದಾರೆ.
 
ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ.ಸಂಸತ್ತಿನಲ್ಲಿ ಸ್ವತಂತ್ರ ಧ್ವನಿಯಾಗುವುದು ಮುಖ್ಯ.

ಸ್ವತಂತ್ರ ಧ್ವನಿ ಮಾತನಾಡಿದರೆ ಅದು ಯಾವುದೇ ರಾಜಕೀಯ ಪಕ್ಷದಿಂದಲ್ಲ ಎಂದು ಜನರು ನಂಬುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ನ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರಾದ ಸಿಬಲ್ ಅವರು 23 ಭಿನ್ನಮತೀಯರ ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಅವರು ಪಕ್ಷದ ನಾಯಕತ್ವ ಮತ್ತು ಸಂಘಟನೆಯ ಬಗ್ಗೆ ಕೂಲಂಕಷ ಪರೀಕ್ಷೆಗೆ ಕರೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಏನಿದು ಭಾರತ್ ಜೋಡೋ ಯಾತ್ರಾ ಸಮಿತಿ?