Select Your Language

Notifications

webdunia
webdunia
webdunia
webdunia

ರಾಜ್ಯಸಭೆಯಲ್ಲಿ ಮೊದಲ ಭಾಷಣ ಮಾಡಿದ ಅಮಿತ್ ಶಾ ಹೇಳಿದ್ದೇನು?

ರಾಜ್ಯಸಭೆಯಲ್ಲಿ ಮೊದಲ ಭಾಷಣ ಮಾಡಿದ ಅಮಿತ್ ಶಾ ಹೇಳಿದ್ದೇನು?
ನವದೆಹಲಿ , ಸೋಮವಾರ, 5 ಫೆಬ್ರವರಿ 2018 (20:23 IST)

ರಾಜ್ಯಸಭೆಯಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಅಮಿತ್ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧವೇ ಗುಡುಗಿದ್ದಾರೆ.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇರುವುದು ನಿಜ. ಆದರೆ, ಇದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.

ದೇಶದಲ್ಲಿ ನೀವು 55 ವರ್ಷಗಳ ಕಾಲ ಆಡಳಿತ ನಡೆಸಿದ ಬಳಿಕದ ಸ್ಥಿತಿ ನಿರುದ್ಯೋಗದ ಸಮಸ್ಯೆ ಎಂದ ಅವರು ಇದಕ್ಕೆ ಕಾಂಗ್ರೆಸ್ ಯಾಕೆ ಪರಿಹಾರ ಕಂಡುಕೊಂಡಿಲ್ಲ ಎಂದು ಪ್ರತಿಪಕ್ಷದ ವಿರುದ್ಧವೇ ಹರಿಹಾಯ್ದಿದ್ದಾರೆ.

ತ್ರಿವಳಿ ತಲಾಕ್, ಕಾಶ್ಮೀರ, ಜಾತಿ ತಾರತಮ್ಯ ಹಾಗೂ ಆಡಳಿತದಲ್ಲಿನ ಪಾರದರ್ಶಕತೆ ಬಗ್ಗೆ ಮಾತನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

6 ಕೋಟಿ ರೂಪಾಯಿಗೆ ಮಾರಾಟವಾದ ಈ ಬೈಕ್ ಏನಿದರ ವಿಶೇಷ...!