Webdunia - Bharat's app for daily news and videos

Install App

ಮೊಬೈಲ್ ಡೇಟಾ ಖಾಲಿ ಮಾಡಿದ್ದಕ್ಕೆ ತಮ್ಮನಿಗೆ ಅಣ್ಣ ಮಾಡಿದ್ದೇನು?

Webdunia
ಶನಿವಾರ, 21 ನವೆಂಬರ್ 2020 (07:40 IST)
ಜೋಧ್ ಪುರ : ಮೊಬೈಲ್ ನೆಟ್ ಖಾಲಿ ಮಾಡಿದ್ದಕ್ಕಾಗಿ 23 ವರ್ಷದ ಯುವಕ ತನ್ನ ಕಿರಿಯ ಸಹೋದರನನ್ನು ಚಾಕುವಿನಿಂದ ಇರಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಹೋದರನ ಮೊಬೈಲ್ ನಲ್ಲಿರುವ ಇಂಟರ್ ನೆಟ್ ಡೇಟಾವನ್ನು ಕಿರಿಯ ಸಹೋದರ ಬಳಸಿದ್ದ ಕಾರಣ ಅದು ಖಾಲಿಯಾಗಿದೆ. ಇದನ್ನು ತಿಳಿದ ಯುವಕ ಕೋಪಗೊಂಡು ಆತನನ್ನು ಮನೆಯ ಮಹಡಿಯ ಮೇಲೆ ಕರೆದುಕೊಂಡು ಹೋಗಿ ಗದರಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದು ಕೋಪಗೊಂಡ ಯುವಕ ಸಹೋದರನ ಎದೆಗೆ ಚಾಕುವಿನಿಂದ 4 ಬಾರಿ ಚುಚ್ಚಿ ಓಡಿಹೋಗಿದ್ದಾನೆ. ರಕ್ತ ಸ್ರಾವದಲ್ಲಿ ಬಿದ್ದ ಹುಡುಗನನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ, ಬಳಿಕ ಆತನನ್ನು ರೈಲ್ವೆ ನಿಲ್ದಾಣದ ಬಳಿ ಬಂಧಿಸಲಾಗಿದೆ ಎನ್ನಲಾಗಿದೆ.

 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments