Publish Date: Mon, 19 Oct 2020 (07:10 IST)
Updated Date: Mon, 19 Oct 2020 (07:23 IST)
ಕಾನ್ಪುರ : 22 ವರ್ಷದ ದಲಿತ ಯುವತಿಯ ಮೇಲೆ ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಸ್ನೇಹಿತ ಸೇರಿ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ ನಡೆದಿದೆ.
ಯುವತಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಮನೆಗೆ ನುಗ್ಗಿದ ಆರೋಪಿಗಳು ಆಕೆಯನ್ನು ಬೆದರಿಸಿ ಮಾನಭಂಗ ಎಸಗಿದ್ದಾರೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ಘಟನೆ ನಡೆದ 1 ವಾರದ ಬಳಿಕ ಯುವತಿ ಮನೆಯವರಿಗೆ ವಿಷಯ ತಿಳಿಸಿದಾಗ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಇಸದ್ದಾರೆ ಎನ್ನಲಾಗಿದೆ.