Webdunia - Bharat's app for daily news and videos

Install App

ಮಧ್ಯಂತರ ಜಾಮೀನಿನ 21 ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಏನು ಮಾಡಬಹುದು, ಮಾಡಬಾರದು ಇಲ್ಲಿದೆ ವಿವರ

Krishnaveni K
ಶುಕ್ರವಾರ, 10 ಮೇ 2024 (16:56 IST)
ನವದೆಹಲಿ: ಅಬಕಾರಿ ಅಕ್ರಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಇದೀಗ ಕೋರ್ಟ್ ಮಧ‍್ಯಂತರ ಜಾಮೀನು ಮಂಜೂರು ಮಾಡಿದೆ. ಮುಂದಿನ ಜನವರಿ 2 ರವರೆಗೂ ಕೇಜ್ರಿವಾಲ್ ಬಿಡುಗಡೆಯ ಭಾಗ್ಯ ಅನುಭವಿಸಲಿದ್ದಾರೆ

ಜೂನ್ 2 ರಂದು ಮತ್ತೆ ಕೋರ್ಟ್ ಮುಂದೆ ಶರಣಾಗಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೋರ್ಟ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಿದೆ. ಈ ಕಾಲಾವಧಿಯಲ್ಲಿ ಅವರು ಏನು ಮಾಡಬಹುದು, ಏನು ಮಾಡಬಾರದು ಎಂಬ ಬಗ್ಗೆ ಕೋರ್ಟ್ ಷರತ್ತು ವಿಧಿಸಿದೆ.

ಬಂಧನಕ್ಕೊಳಗಾಗಿದ್ದರೂ ಕೇಜ್ರಿವಾಲ್ ಇದುವರೆಗೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ ಈಗ ಬಿಡುಗಡೆಯಾಗಿದೆ ಎಂಬ ಮಾತ್ರಕ್ಕೆ ಅವರು ಮುಖ್ಯಮಂತ್ರಿಗಳ ಕಚೇರಿಗೆ ಹೋಗಿ ಆಡಳಿತ ನಡೆಸುವಂತಿಲ್ಲ. ತಮ್ಮ ಕಚೇರಿಗೆ ಅವರು ಭೇಟಿ ಕೊಡುವಂತಿಲ್ಲ.

ಇನ್ನು, ಮಾಧ್ಯಮಗಳ ಮುಂದೆ ದೆಹಲಿ ಅಬಕಾರಿ ಅಕ್ರಮದಲ್ಲಿ ತನ್ನ ಪಾತ್ರದ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡುವಂತಿಲ್ಲ. ತಿಹಾರ್ ಜೈಲಿನಿಂದ ಬಿಡುಗಡೆಯಾಗಬೇಕಾದರೆ 50,000 ರೂ.ಗಳ ಶ್ಯೂರಿಟಿ ಬಾಂಡ್ ನೀಡಬೇಕು. ಈ ಮಧ್ಯಂತರ ಜಾಮೀನು ಅವಧಿಯಲ್ಲಿ ಯಾವುದೇ ಕಡತಗಳಿಗೆ, ಸರ್ಕಾರಿ ಆದೇಶಗಳಿಗೆ ಅವರು ಸಹಿ ಹಾಕುವಂತಿಲ್ಲ. ಒಂದು ವೇಳೆ ಅನಿವಾರ್ಯವಾದರೆ ಅದಕ್ಕೆ ಲೆಫ್ಟಿನೆಂಟ್ ಜನರಲ್ ಅನುಮೋದನೆ ಬೇಕು.

ಮಧ್ಯಂತರ ಜಾಮೀನು ಕಾಲಾವಧಿಯಲ್ಲಿ ಕೇಜ್ರಿವಾಲ್ ಗೆ ತಮ್ಮ ಪಕ್ಷದ ಪರ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಈ 21 ದಿನಗಳ ಬಿಡುಗಡೆ ಅವರ ಮೇಲಿನ ಆರೋಪಗಳನ್ನು ಇಲ್ಲವಾಗಿಸದು ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತತ 11 ಗಂಟೆ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ಸುಜಾತ ಭಟ್

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಮುಂದಿನ ಸುದ್ದಿ
Show comments