Webdunia - Bharat's app for daily news and videos

Install App

ಪ್ರೇಯಸಿಯ ಕತ್ತು ಸೀಳಿ ತಾನೂ ನೇಣು ಬಿಗಿದುಕೊಂಡ ಕಾರಣವಾದ್ರು ಏನು?!

Webdunia
ಗುರುವಾರ, 11 ನವೆಂಬರ್ 2021 (09:02 IST)
ಚೆನ್ನೈ : ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಆಕೆಯ ಪೋಷಕರು ಒಪ್ಪದ ಕಾರಣ ಯುವನೊಬ್ಬ ತಾನೇ ತನ್ನ ಪ್ರೇಯಸಿಯ ಕತ್ತು ಸೀಳಿ, ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಮಿಂಜೂರ್ ನಿವಾಸಿ ಅಜಿತ್ ಎಂಬ ವ್ಯಕ್ತಿ ತಾರಾಮಣಿಯಲ್ಲಿರುವ ತನ್ನ ಪ್ರೇಯಸಿಯ ಮನೆಯಲ್ಲಿ ಆಕೆಯ ಕುತ್ತಿಗೆ ಸೀಳಿ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಅವರಿಬ್ಬರೂ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಜಿತ್ ಮತ್ತು 22 ವರ್ಷದ ಯುವತಿ ಮೊಬೈಲ್ ಫೋನ್ ರಿಟೇಲ್ ಶೋರೂಮ್‌ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಸ್ನೇಹಿತರಾಗಿದ್ದರು. ಆ ಸ್ನೇಹ ಕೆಲವೇ ದಿನಗಳಲ್ಲಿ ಪ್ರೀತಿಯಾಗಿ ಬದಲಾಗಿತ್ತು. ಅವರಿಬ್ಬರೂ ಮದುವೆಯಾಗಿ ಜೀವನ ಪೂರ್ತಿ ಒಟ್ಟಿಗೇ ಇರಲು ನಿರ್ಧರಿಸಿದ್ದರು. ಆದರೆ, ಆ ಯುವತಿಯ ಪೋಷಕರು ಇವರಿಬ್ಬರ ಸಂಬಂಧವನ್ನು ಒಪ್ಪದೆ ಬೇರೊಬ್ಬ ಪುರುಷನೊಂದಿಗೆ ಆಕೆಯ ಮದುವೆಯನ್ನು ಏರ್ಪಡಿಸಿದ್ದರು. ಇದರಿಂದ ಕೋಪಗೊಂಡ ಅಜಿತ್ ಭಾನುವಾರ ತಾರಾಮಣಿಯ ಕನಗಂ ಪ್ರದೇಶದಲ್ಲಿರುವ ತನ್ನ ಪ್ರೇಯಸಿಯ ಮನೆಗೆ ಹೋಗಿ ತಾವಿಬ್ಬರೂ ಸಾಯಬೇಕೆಂದು ನಿರ್ಧರಿಸಿದ್ದ.
ಪ್ರೇಯಸಿಯ ಮನೆಗೆ ಹೋಗಿ ಆಕೆಗೆ ತನ್ನ ಪ್ಲಾನ್ ಹೇಳಿದಾಗ ಆಕೆ ಸಾಯಲು ಒಪ್ಪಿಲ್ಲ. ಇದರಿಂದ ತಾನೇ ಚಾಕುವಿನಿಂದ ಆಕೆಯ ಕುತ್ತಿಗೆ ಸೀಳಿದ ಅಜಿತ್ ಬಳಿಕ ತಾನು ಕೂಡ ನೇಣು ಬಿಗಿದುಕೊಂಡು ಸಾಯಲು ಪರಯತ್ನಿಸಿದ್ದ. ಅಷ್ಟರಲ್ಲಿ ರೂಮಿನಲ್ಲಿ ಗಲಾಟೆ ಕೇಳಿ ಬಾಗಿಲು ಒಡೆದು ಒಳಗೆ ಬಂದ ಆಕೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ತಮ್ಮ ಮಗಳು ಕಂಡಿದ್ದಳು. ತಕ್ಷಣ ಆಕೆಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಬಳಿಕ, ಆ ಯುವತಿಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಾರಾಮಣಿ ಪೊಲೀಸರು ಆ ಮನೆಗೆ ಧಾವಿಸಿ ಬಾಗಿಲು ಒಡೆದು ನೋಡಿದಾಗ ಅಜಿತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಮನೆಗೆ ಬಂದ ಅಜಿತ್ ನೀವು ಯಾರಾದರೂ ನಮ್ಮಿಬ್ಬರ ಮದುವೆ ನಿಲ್ಲಿಸಲು ಪ್ರಯತ್ನಿಸಿದರೆ ಎಲ್ಲರನ್ನೂ ಕೊಲ್ಲುವುದಾಗಿ ಅಜಿತ್ ಬೆದರಿಸಿದ್ದ. ನಂತರ ನಮ್ಮ ಮಗಳ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಎಂದು ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments