Webdunia - Bharat's app for daily news and videos

Install App

ರಾಮಮಂದಿರಕ್ಕಾಗಿ ಪ್ರಧಾನಿ ಮೋದಿ 11 ದಿನದ ವ್ರತ ಹೇಗಿರುತ್ತೆ?

Krishnaveni K
ಶನಿವಾರ, 13 ಜನವರಿ 2024 (11:15 IST)
ನವದೆಹಲಿ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ 11 ದಿನಗಳ ವ್ರತ ಕೈಗೊಂಡಿದ್ದಾರೆ.

ಜನವರಿ 22 ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿದೆ. ಅಯೋಧ‍್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ದಿನದವರೆಗೂ ಪ್ರಧಾನಿ ಮೋದಿ ಮಡಿಯಲ್ಲಿರಲಿದ್ದಾರೆ.

ಅದರಂತೆ ಪ್ರಧಾನಿ ಮೋದಿ ಇನ್ನು 11 ದಿನಗಳವರೆಗೆ ಕಠಿಣ ಉಪವಾಸ ವ್ರತ ಮಾಡಲಿದ್ದಾರೆ. ಇದರ ಅಂಗವಾಗಿಯೇ ಅವರು ನಿನ್ನೆ ಕಾಲ ರಾಮ್ ದೇಗುಲ ಸ್ವಚ್ಛತಾ ಕೆಲಸದಲ್ಲಿ ಭಾಗಿಯಾಗಿದ್ದರು. ಈ ವ್ರತ ಮಾಡುವವರು ಪ್ರಾತಃ ಕಾಲದಲ್ಲಿಯೇ ಎದ್ದು ಧ‍್ಯಾನ ಮಾಡಿ, ಸಾತ್ವಿಕ ಆಹಾರ ಸೇವಿಸಬೇಕು. 11 ದಿನಗಳ ಈ ಆಧ್ಯಾತ್ಮಕ ಅನುಷ್ಠಾನವನ್ನು ಯಮ ನಿಯಮ ಎಂದೂ ಕರೆಯುತ್ತಾರೆ. ಯೋಗ, ಧ್ಯಾನ ಸೇರಿದಂತೆ ಕಠಿಣ ನಿಯಮಗಳನ್ನು ಪಾಲಿಸಬೇಕು.

ವಿಶೇಷವೆಂದರೆ ಪ್ರಧಾನಿ ಮೋದಿ ಈ ಅನುಷ್ಠಾನವನ್ನು ಶ್ರೀರಾಮ ಚಂದ್ರನಿಗೆ ವನವಾಸದ ವೇಳೆ ಹೆಚ್ಚು ಸಮಯ ಕಳೆದಿದ್ದ ಪಂಚವಟಿಯಲ್ಲೇ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments