ಆಯುಷ್ಮಾನ್ ಭಾರತ್ ಯೋಜನೆ ಎಂದರೇನು, ಆಯುಷ್ಮಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ವಿವರ

Krishnaveni K
ಬುಧವಾರ, 17 ಜುಲೈ 2024 (11:50 IST)
Photo Credit: Instagram
ನವದೆಹಲಿ: ಬಡ ಕುಟುಂಬಕ್ಕೂ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೌಲಭ್ಯ ಸಿಗುವಂತಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಯೇ ಆಯುಷ್ಮಾನ್ ಭಾರತ್ ಕಾರ್ಡ್ ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ. ಇದರ ವಿವರಗಳು ಇಲ್ಲಿವೆ.

2018 ರಲ್ಲಿ ಮೋದಿ ಸರ್ಕಾರ ಈ ಒಂದು ಯೋಜನೆಯನ್ನು ಜಾರಿಗೆ ತಂದಿತ್ತು. ಅದರಂತೆ ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಂಡು 5 ಲಕ್ಷ ರೂ.ವರೆಗಿನ ವೈದ್ಯಕೀಯ ವೆಚ್ಚವನ್ನು ಭರಿಸುವ ಇನ್ಶೂರೆನ್ಸ್ ಸೇವೆ ಇದಾಗಿದೆ. ಈಗಾಗಲೇ ಸುಮಾರು 50 ಕೋಟಿ ಜನರು ಇದರ ಲಾಭ ಪಡೆದಿದ್ದಾರೆ.

ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಬಳಸಿ ದೇಶದ ಯಾವುದೇ ಮೂಲೆಯಲ್ಲೂ ಕ್ಯಾಶ್ ಲೆಸ್ ವೈದ್ಯಕೀಯ ಸೇವೆ ಅಥವಾ ವೈದ್ಯಕೀಯ ಚಿಕಿತ್ಸೆ, ಪರೀಕ್ಷೆ, ದಾಖಲಾತಿ ಸೇರಿದಂತೆ ಎಲ್ಲಾ ವೆಚ್ಚಗಳನ್ನು ಭರಿಸಬಹುದಾಗಿದೆ. ಕಡಿಮೆ ಆದಾಯ ಹೊಂದಿರುವ, ಆರ್ಥಿಕವಾಗಿ ದುರ್ಬಲವಾಗಿರುವ, ಕೂಲಿ ಕಾರ್ಮಿಕರು, ಮೀನುಗಾರರು, ನೇಕಾರರು, ಬಡಗಿಗಳು, ಕಮ್ಮಾರರು, ಕುಶಲ ಕರ್ಮಿಗಳು, ಸರ್ಕಾರದಿಂದ ಪೆನ್ಶನ್ ಪಡೆಯದವರು ಮುಂತಾದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವುದಕ್ಕೆ ಅನ್ವಯವಾಗುವುದಿಲ್ಲ?
ಈ ಯೋಜನೆಯಲ್ಲಿ ಒಪಿಡಿ, ಮಾದಕ ವ್ಯಸನ ಪುನಶ್ಚೃತನ, ಕಾಸ್ಮೆಟಿಕ್ ಸರ್ಜರಿ, ಫಲವಂತಿಕೆಯ ಚಿಕಿತ್ಸೆ, ಅಂಗಾಂಗ ಕಸಿ ಚಿಕಿತ್ಸೆಗಳ ವೆಚ್ಚ ಭರಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ಯಾವೆಲ್ಲಾ ದಾಖಲೆಗಳು ಬೇಕು
ಆಧಾರ್ ಕಾರ್ಡ್ ಬಯೋಮೆಟ್ರಿಕ್
ರೇಷನ್ ಕಾರ್ಡ್
ಫ್ಯಾಮಿಲಿ ಟ್ರೀ (ಪಿಪಿಡಿ ಐಡಿ)
ಇವಿಷ್ಟೂ ಅಗತ್ಯವಾಗಿ ಬೇಕಾಗುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು  https://pmjay.gov.in/ ಎಂಬ ವೆಬ್ ಸೈಟ್ ಗೆ ಲಾಗಿನ್ ಆಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ