Webdunia - Bharat's app for daily news and videos

Install App

ಒಂದೇ ದೇಶ, ಒಂದು ಚುನಾವಣೆ ಎಂದರೇನು, ವಿರೋಧ ಪಕ್ಷಗಳ ವಿರೋಧವೇಕೆ ಇಲ್ಲಿದೆ ಡೀಟೈಲ್ಸ್

Krishnaveni K
ಗುರುವಾರ, 19 ಸೆಪ್ಟಂಬರ್ 2024 (10:10 IST)
ನವದೆಹಲಿ: ಕೇಂದ್ರ ಸರ್ಕಾರ ಒಂದೇ ದೇಶ ಒಂದೇ ಚುನಾವಣೆ ಎಂಬ ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷಗಳಿಂದ ವಿರೋಧವೂ ವ್ಯಕ್ತವಾಗಿದೆ. ಅಷ್ಟಕ್ಕೂ ಒಂದೇ ದೇಶ, ಒಂದೇ ದೇಶ ಚುನಾವಣೆ ನೀತಿಯ ಲಾಭ, ನಷ್ಟಗಳೇನು ಎಂಬ ವಿವರ ಇಲ್ಲಿದೆ.

ಹಲವು ವರ್ಷಗಳಿಂದ ಒಂದೇ ದೇಶ ಒಂದು ಚುನಾವಣೆ ಹಲವು ವರ್ಷಗಳಿಂದ ಚರ್ಚೆಯಲ್ಲಿತ್ತು. ಇದೀಗ ಕೇಂದ್ರ ಸರ್ಕಾರ ನೀತಿಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಪಟ್ಟು ಹಿಡಿದಿದೆ. ಇತ್ತ, ವಿಪಕ್ಷಗಳು ಇದರಿಂದ ಒಕ್ಕೂಟ ವ್ಯವಸ್ಥೆಗೆ ತೊಂದರೆಯಾಗುತ್ತದೆ ಎನ್ನುತ್ತಿದೆ.

ಏಕ ಚುನಾವಣೆ ಲಾಭಗಳೇನು, ಜಾರಿ ಹೇಗೆ
ಒಂದೇ ಹಂತದಲ್ಲಿ ಲೋಕಸಭೆ, ವಿಧಾನಸಭೆಗೆ ಚುನಾವಣೆ ನಡೆಸುವುದು. ಇದರಿಂದ ಆರ್ಥಿಕ ಹೊರೆ ತಗ್ಗುತ್ತದೆ. ಲೋಕಸಭೆ, ವಿಧಾನಸಭೆ ಚುನಾವಣೆ ನಡೆದ 100 ದಿನಗಳೊಳಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು. ಯಾವುದಾದರೂ ರಾಜ್ಯದಲ್ಲಿ ಅವಧಿಗೆ ಮುನ್ನ ಸರ್ಕಾರ ಪತನವಾದರೆ ಮುಂದಿನ ಲೋಕಸಭೆ ಚುನಾವಣೆವರೆಗಿನ ಅವಧಿಗೆ ಮಾತ್ರ ಚುನಾವಣೆ ನಡೆಸುವುದು ಯೋಜನೆಯ ಉದ್ದೇಶವಾಗಿದೆ.

ಕೇಂದ್ರದ ವಾದ
ದೇಶದಾದ್ಯಂತ ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. ಇದರಿಂದ ಖರ್ಚು ಉಳಿತಾಯವಾಗುತ್ತದೆ. ಚುನಾವಣೆ ವೆಚ್ಚ ಇಳಿದರೆ ಅಭಿವೃದ್ಧಿಗೆ ವೇಗ ಸಿಗುತ್ತದೆ. ಏಕ ಚುನಾವಣೆಯಿಂದ ಮತದಾನದ ಪ್ರಮಾಣ ಹೆಚ್ಚಾಗುತ್ತದೆ. ನೀತಿ ಸಂಹಿತೆ ಅಡ್ಡಿಯಿಲ್ಲದೇ ಸರ್ಕಾರೀ ಯೋಜನೆಗಳನ್ನು ಜಾರಿ ಮಾಡಬಹುದು. ಅಕ್ರಮ ಆರ್ಥಿಕ ವಹಿವಾಟುಗಳಿಗೆ ಕಡಿವಾಣ ಬೀಳುತ್ತದೆ ಎನ್ನುವುದು ಕೇಂದ್ರದ ವಾದವಾಗಿದೆ.

ವಿಪಕ್ಷಗಳ ವಿರೋಧಕ್ಕೆ ಕಾರಣವೇನು?
ಪ್ರಾಯೋಗಿಕವಾಗಿ ನೋಡಿದರೆ ಈ ಯೋಜನೆ ಜಾರಿಗೆ ತರುವುದು ಸುಲಭವಲ್ಲ. ಇದು ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಮಾಡುತ್ತಿರುವ ತಂತ್ರವಷ್ಟೇ. ಒಂದೇ ಪಕ್ಷದ ಆಡಳಿತವಿರುವಂತಾಗುತ್ತದೆ. ಲೋಕಸಭೆ ಚುನಾವಣೆ ಅಬ್ಬರದಲ್ಲಿ ರಾಜ್ಯ ಚುನಾವಣೆಗಳು ಮಹತ್ವ ಕಳೆದುಕೊಳ್ಳುತ್ತವೆ ಎಂಬುದು ವಿಪಕ್ಷಗಳ ವಾದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments