ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸ್ಕೆಚ್‌ ಹಾಕಿದ್ದ ಏಜೆಂಟ್ ನಿಗೂಢ ಸಾವು, ಏನಿದು

Sampriya
ಭಾನುವಾರ, 26 ಅಕ್ಟೋಬರ್ 2025 (15:46 IST)
Photo Credit X
ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಹೌದು ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ಮೋದಿ ಹತ್ಯೆಗೆ ಸಂಚು ನಡೆದಿತ್ತು ಎನ್ನಲಾಗಿದೆ. 

ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ವಿಚಾರವಾಗಿ ಅನೇಕ ಸುದ್ದಿ ಸಂಸ್ಥೆಗಳು ವರದಿ ಮಾಡುತ್ತಿದೆ. 

ಅಮೆರಿಕ ಭಾರತದ ಮೇಲೆ ರಷ್ಯಾ ತೈಲ ಖರೀದಿಸದಂತೆ ಒತ್ತಡ ಹೇರುತ್ತಿರುವುದು ಹಾಗೂ ಭಾರತದ ಕೃಷಿ, ಹಾಲಿನ ಮಾರುಕಟ್ಟೆಯನ್ನು ತನಗೆ ಮುಕ್ತಮಾಡಿಕೊಡಬೇಕೆಂಬ ಬೇಡಿಕೆಗೆ ಭಾರತ ಇದುವರೆಗೂ ಬಗ್ಗಿಲ್ಲ. 

ಈ ಹಿನ್ನೆಲೆ ಈಚೆಗೆ ಭಾರತ ಹಾಗೂ ಅಮೆರಿಕ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆ. ಈ ಮಧ್ಯೆಯೇ ಇಂತಹ ಊಹಾಪೋಹ ಭಾರೀ ಚರ್ಚೆಗೆ ಕಾರಣವಾಗಿದೆ. 

ಅಮೆರಿಕದ ಸುಂಕ ಬೆದರಿಕೆಗಳ ಬೆನ್ನಲ್ಲೇ ಭಾರತ- ಚೀನಾ ಸಂಬಂಧಗಳಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿತ್ತು ಅದಷ್ಟೇ ಅಲ್ಲದೇ ರಷ್ಯಾ-ಭಾರತ-ಚೀನಾಗಳು ಒಗ್ಗೂಡಿರುವುದನ್ನು ಸಹಿಸದ ದೇಶವೊಂದು ಮೋದಿ ಹತ್ಯೆಗೆ ಸಂಚು ರೂಪಿಸಿದೆ ಎನ್ನಲಾಗಿದೆ. 

ಈ ಮಾಹಿತಿ ಹೊರಬೀಳಲು ಕಾರಣ ‌ಏನೆಂದರೆ ಢಾಕಾದಲ್ಲಿ ನಿಯೋಜಿಸಲಾಗಿದ್ದ ಅಮೆರಿಕದ ವಿಶೇಷ ಪಡೆಗಳ ಅಧಿಕಾರಿ ಟೆರೆನ್ಸ್ ಅರ್ವೆಲ್ಲೆ ಜಾಕ್ಸನ್ ಆಗಸ್ಟ್ 31 ರಂದು ಶವವಾಗಿ ಪತ್ತೆಯಾಗಿರುವುದಾಗಿದೆ. 

ಈ ವ್ಯಕ್ತಿಯನ್ನು ಅಮೆರಿಕ ಮ್ಯಾನ್ಮಾರ್ ನಲ್ಲಿ ಅರಾಕನ್ ಆರ್ಮಿಗೆ ಬಾಂಗ್ಲಾ ನೆರವು ನೀಡಲು ನಿಯೋಜಿಸುವ ನೆಪದಲ್ಲಿ ಸಕ್ರಿಯವಾಗಿರಿಸಿತ್ತು. ಈ ನಿಗೂಢ ಸಾವು ಸಿಐಎ ಹೆಜ್ಜೆಗುರುತು ಹಾಗೂ ಚೀನಾದಲ್ಲಿ ಮೋದಿ ಹತ್ಯೆಯ ಸಂಚಿನ ಯೋಜನೆ ಬಗ್ಗೆ ಹೇಳಿದೆ.

ಚೀನಾದ ನೆಲದಲ್ಲಿ ಭಾರತದ ಪ್ರಧಾನಿಯನ್ನು ಹತ್ಯೆ ಮಾಡಿದರೆ, ಶಾಶ್ವತವಾಗಿ ಚೀನಾ- ಭಾರತವನ್ನು ದೂರ ಮಾಡುವ ಮತ್ತು ಭಾರತದಲ್ಲಿ ಈಗಿನ ದೃಢ ಸರ್ಕಾರವನ್ನು ತೆಗೆದು ಅರಾಜಕತೆ ಉಂಟುಮಾಡಿ ತನ್ನ ಮಾತು ಕೇಳುವ ಸರ್ಕಾರವನ್ನು ಸ್ಥಾಪಿಸಬಹುದು ಎಂಬುದು ಈ ಯೋಜನೆಯ ಹಿಂದಿನ ಲೆಕ್ಕಾಚಾರವಾಗಿತ್ತು ಆದರೆ ರಷ್ಯಾ- ಭಾರತ ಜಂಟಿಯಾಗಿ ಈ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದವು ಎಂದು ಹೇಳಲಾಗುತ್ತಿದೆ.

ಮೋದಿ ಹತ್ಯೆಗೆ ಬಂದಿದ್ದ ಏಜೆಂಟ್ ಅತ್ಯಂತ ನಿಗೂಢವಾಗಿ ಬಾಂಗ್ಲಾದೇಶದ ಹೊಟೆಲ್ ನಲ್ಲಿ ಸಾವಿಗೀಡಾಗಿದ್ದಾನೆ. ಈ ಮೂಲಕ ಸಿಐಎ ಲೆಕ್ಕಾಚಾರವನ್ನು ಭಾರತದ ರಾ ಸಂಪೂರ್ಣವಾಗಿ ತಲೆಕೆಳಗೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments