Select Your Language

Notifications

webdunia
webdunia
webdunia
webdunia

ಅತ್ಯಾಚಾರ ಸಂತ್ರಸ್ತೆ ಕೋರ್ಟ್ ನಲ್ಲಿ ಸಾಕ್ಷಿ ಹೇಳಬಾರದೆಂದು ದುಷ್ಕರ್ಮಿಗಳು ಮಾಡಿದ್ದೇನು ಗೊತ್ತಾ?

ಅತ್ಯಾಚಾರ ಸಂತ್ರಸ್ತೆ ಕೋರ್ಟ್ ನಲ್ಲಿ ಸಾಕ್ಷಿ ಹೇಳಬಾರದೆಂದು ದುಷ್ಕರ್ಮಿಗಳು ಮಾಡಿದ್ದೇನು ಗೊತ್ತಾ?
ಗುಜರಾತ್ , ಸೋಮವಾರ, 14 ಜನವರಿ 2019 (06:36 IST)
ಗುಜರಾತ್ :  ನ್ಯಾಯಾಲಯದಲ್ಲಿ ಸಾಕ್ಷಿ ಹೇಳಬಾರದು ಎಂದು ಅತ್ಯಾಚಾರ ಸಂತ್ರಸ್ತೆಗೆ ದುಷ್ಕರ್ಮಿಗಳು ವಿಷಕುಡಿಸಿರುವ ಘಟನೆ ಗುಜರಾತ್‍ನ ದ್ವಾರಕ ಜಿಲ್ಲೆಯ ಹಠತಾಳ ಪ್ರದೇಶದಲ್ಲಿ ನಡೆದಿದೆ.


ಅತ್ಯಾಚಾರಕ್ಕೊಳಗಾದ 17 ವರ್ಷದ ಅಪ್ರಾಪ್ತ ಬಾಲಕಿ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎರಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯನ್ನು ಅಡ್ಡಗಟ್ಟಿ ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಬಾರದು ಎಂದು ಬೆದರಿಸಿದ್ದು, ಇದಕ್ಕೆ ಬಾಲಕಿ ಒಪ್ಪದಿದ್ದಾಗ ಪಾಪಿಗಳು ಬಾಲಕಿಗೆ ಬಲವಂತವಾಗಿ ವಿಷ ಕುಡಿಸಿ ಪರಾರಿಯಾಗಿದ್ದಾರೆ.


ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬಾಲಕಿಯನ್ನು ದಾರಿಹೋಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯಕ್ಕೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.


ಬಾಲಕಿಯ ಕುಟುಂಬದವರು ಈ ಬಗ್ಗೆ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಆದರೆ ಈ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದವರು ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಮುಚ್ಚಿಹಾಕಲು ಅವರೇ ಈ ಕೃತ್ಯವೆಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದೇವರ ಮೊರೆ ಹೋದ ಪುಟ್ಟರಂಗಶೆಟ್ಟಿ…