Webdunia - Bharat's app for daily news and videos

Install App

ಬಡವರು ಏನು ತಿನ್ನಬೇಕು, ಆಟಾ, ಡಾಟಾ?: ಮೋದಿ ವಿರುದ್ಧ ಲಾಲು ಲೇವಡಿ

Webdunia
ಶನಿವಾರ, 3 ಸೆಪ್ಟಂಬರ್ 2016 (18:43 IST)
ದೇಶದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಉತ್ಪಾದನೆಯಾದ ರಿಲಯನ್ಸ್ ಜಿಯೋ ಜಾಹಿರಾತುಗಳಲ್ಲಿ ಪ್ರಧಾನಿ ಮೋದಿ ಕಾಣಿಸಿಕೊಂಡಿರುವ ಬಗ್ಗೆ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಲೇವಡಿ ಮಾಡಿದ್ದಾರೆ.
 
ಪ್ರಧಾನಿ ಮೋದಿ ಭಾವಚಿತ್ರವಿರುವ ಜಿಯೋ ಡಿಜಿಟಲ್ ಲೈಫ್ ಜಾಹೀರಾತು ಪತ್ರಿಕೆಗಳಲ್ಲಿ ಕಾಣಿಸಿಕೊಂಡ ನಂತರ ಆಮ್ ಆದ್ಮಿ ಪಾರ್ಟಿ ಮತ್ತು ಕಾಂಗ್ರೆಸ್ ಪಕ್ಷ ಮೋದಿ ವಿರುದ್ಧ ನಿನ್ನೆ ವಾಗ್ದಾಳಿ ನಡೆಸಿದ್ದವು. 
 
ಇದೀಗ ಲಾಲು ಯಾದವ್ ಟ್ವೀಟ್ ಮಾಡಿ, ಬಡವರು ಏನು ತಿನ್ನಬೇಕು ಆಟಾ ಅಥವಾ ಡಾಟಾ? ಡಾಟಾ ಅಗ್ಗವಾದರೆ ಆಟಾ (ಹಿಟ್ಟು) ದುಬಾರಿಯಾಗಿದೆ. ಇದು ಮೋದಿ ದೇಶ ಬದಲಿಸುವ ತಂತ್ರ. ಒಂದು ವೇಳೆ ಮೊಬೈಲ್ ಕ್ಷೇತ್ರದಲ್ಲಿ ನೀವಿದ್ದೀರಿ ಎಂದಾದಲ್ಲಿ ಕಾಲ್ ಡ್ರಾಪ್‌ ಸಮಸ್ಯೆಗೆ ಯಾರು ಹೊಣೆ ಎನ್ನುವುದನ್ನು ಬಹಿರಂಗಪಡಿಸಿ ಎಂದು ಟ್ವೀಟ್ ಮಾಡಿದ್ದಾರೆ. 
 
ನಿನ್ನೆಯಷ್ಟೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿಯವರನ್ನು ಮಿಸ್ಟರ್ ರಿಲಯನ್ಸ್ ಎಂದು ಲೇವಡಿ ಮಾಡಿ ರಿಲಯನ್ಸ್‌ಗಾಗಿ ಮಾಡೆಲ್ ವೃತ್ತಿ ಮುಂದುವರಿಸುವಂತೆ ಸಲಹೆ ನೀಡಿದ್ದರು. 
 
ಏತನ್ಮಧ್ಯೆ, ರಿಲಯನ್ಸ್ ಕಂಪೆನಿ ಪ್ರಧಾನಿ ಮೋದಿಯವರ ಭಾವಚಿತ್ರವನ್ನು ಪತ್ರಿಕಾ ಜಾಹೀರಾತುಗಳಲ್ಲಿ ಬಳಸುವ ಮುನ್ನ ಪ್ರಧಾನಿ ಕಚೇರಿಯ ಅನುಮತಿ ಪಡೆದಿತ್ತೆ? ಒಂದು ವೇಳೆ ಪಡೆಯದಿದ್ದಲ್ಲಿ ರಿಲಯನ್ಸ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.
 
ಆದಾಗ್ಯೂ, ಪ್ರಧಾನಿ ಮೋದಿಯವರ 1.2 ಬಿಲಿಯನ್ ಜನತೆಯ ಡಿಜಿಟಲ್ ಇಂಡಿಯಾ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಉದ್ಘಾಟಿಸಲಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments