Webdunia - Bharat's app for daily news and videos

Install App

15 ಹಿಂದೂ ಕೈದಿಗಳ ಬಿಡುಗಡೆಗೆ 50 ಸಾವಿರ ರೂ.ದೇಣಿಗೆ ನೀಡಿದ ಮುಸ್ಲಿಮರು

Webdunia
ಶುಕ್ರವಾರ, 27 ನವೆಂಬರ್ 2015 (16:48 IST)
ದೇಶದಲ್ಲಿ ಅಸಹಿಷ್ಣುತೆಯ ಬಗ್ಗೆ ಚರ್ಚೆ ವ್ಯಾಪಕವಾಗಿರುವಂತೆಯೇ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದ ಘಟನೆ ದೇಶದಲ್ಲಿ ಇನ್ನೂ ಕೋಮುಸಾಮರಸ್ಯತೆ ಜೀವಂತವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. 
 
ಮಾಧ್ಯಮ ವರದಿಗಳ ಪ್ರಕಾರ, ಜೈಲಿನಲ್ಲಿದ್ದ 15 ಹಿಂದೂಗಳ ಬಿಡುಗಡೆಗೆ ಮುಸ್ಲಿಂ ಸಮುದಾಯದ ಮುಖಂಡರು ಒಂದಾಗಿ 50 ಸಾವಿರ ರೂಪಾಯಿಗಳ ದೇಣಿಗೆ ಸಂಗ್ರಹಿಸಿ ಸಹಕರಿಸಿದ್ದಾರೆ. 
 
ಕೆಲ ಸಣ್ಣ ಪುಟ್ಟ ಅಪರಾಧ ಕೃತ್ಯಗಳಿಗಾಗಿ ಜೈಲು ಸೇರಿದ್ದ ಹಿಂದೂ ಸಮುದಾಯದ ವ್ಯಕ್ತಿಗಳ ಕುಟುಂಬದವರಿಗೆ ನ್ಯಾಯಾಲಯ ವಿಧಿಸಿದ ದಂಡದ ಮೊತ್ತವನ್ನು ಪಾವತಿಸಲು ಸಾಧ್ಯವಾಗಿರದ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲಿಯೇ ಕೊಳೆಯುವಂತಾಗಿತ್ತು.  
 
ಗಮನಾರ್ಹ ವಿಷಯವೆಂದರೆ, ಒಬ್ಬ ಹಿಂದೂ ಅಪರಾಧಿ ತನ್ನ ಕಾರಾಗೃಹ ವಾಸದ ಶಿಕ್ಷೆಯನ್ನು ಪೂರ್ಣಗೊಳಿಸಿದ್ದ. ಆದರೆ. 1000 ರೂಪಾಯಿಗಳ ದಂಡದ ಮೊತ್ತವನ್ನು ಭರಿಸಲು ಸಾಧ್ಯವಾಗಿರಲಿಲ್ಲ.
 
ಮುಸ್ಲಿಂ ಸಮುದಾಯದ ಮುಖಂಡರು ಸಭೆ ಸೇರಿ ಜೈಲಿನಲ್ಲಿರುವ 15 ಮಂದಿ ಹಿಂದೂ ಕೈದಿಗಳ ಬಿಡುಗಡೆಗೆ 50 ಸಾವಿರ ರೂಪಾಯಿಗಳ ದೇಣಿಗೆ ಸಂಗ್ರಹಿಸಿ, ಕೈದಿಗಳನ್ನು ಬಿಡುಗಡೆಗೊಳಿಸಿ ಸಾಮರಸ್ಯತೆಯನ್ನು ಮೆರೆದಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments