ಪಿಎಂ ಕಿಸಾನ್ ಸಮ್ಮಾನ್ ನಿಧಿ 18 ನೇ ಕಂತು ಬಿಡುಗಡೆ ಯಾವಾಗ: ಇಲ್ಲಿದೆ ವಿವರ

Krishnaveni K
ಶನಿವಾರ, 28 ಸೆಪ್ಟಂಬರ್ 2024 (08:59 IST)
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ರೈತರಿಗೆ ನೀಡಲಾಗುವ ಸಹಾಯಧನದ 18 ನೇ ಕಂತು ಬಿಡುಗಡೆ ಯಾವಾಗ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಕೆಲವು ವರದಿಗಳ ಪ್ರಕಾರ ಅಕ್ಟೋಬರ್ 5 ಕ್ಕೆ 18 ನೇ ಕಂತಿನ ಹಣ ಬಿಡುಗಡೆಯಾಗಲಿದೆ.

ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷ ಯೋಜನೆಗಳಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯೂ ಒಂದು. 2019 ರಲ್ಲಿ ಈ ಯೋಜನೆಯನ್ನು ಆರಂಭಿಸಲಾಯಿತು. ಅದರಂತೆ ಎಲ್ಲಾ ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ಸಹಾಯ ಧನವನ್ನು ನೀಡಲಾಗುತ್ತಿದೆ.

ಪ್ರತೀ ಕಂತಿನಲ್ಲಿ 2,000 ರೂ. ನೀಡಲಾಗುತ್ತದೆ. ಇದು ರೈತರ ನೊಂದಾಯಿತ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆಯಾಗುತ್ತದೆ. ಎರಡು ಹೆಕ್ಟೇರ್ ಅಥವಾ ಐದು ಎಕರೆಯೊಳಗಿನ ಜಮೀನು ಹೊಂದಿರುವ ರೈತರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿರುತ್ತಾರೆ.

ಆದರೆ ಸರ್ಕಾರೀ ವೃತ್ತಿಯಲ್ಲಿರುವವರಿಗೆ, ಜನಪ್ರತಿನಿಧಿಗಳಿಗೆ, ವೈದ್ಯ, ಬ್ಯಾಂಕ್ ವೃತ್ತಿಯವರಿಗೆ, ತೆರಿಗೆ ಪಾವತಿಸುತ್ತಿರುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಈಗಾಗಲೇ ಸುಮಾರು 10 ಕೋಟಿ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇದುವರೆಗೆ 17 ಕಂತು ಸಂದಾಯವಾಗಿದ್ದು, ಇದೀಗ 18 ನೇ ಕಂತು ಸಂದಾಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments