Webdunia - Bharat's app for daily news and videos

Install App

ಅಧಿಕಾರದ ದಾಹಕ್ಕಾಗಿ ಜನಪ್ರತಿನಿಧಿಯೊಬ್ಬ ಮತ್ತೊಂದು ವಿವಾಹವಾದ

Webdunia
ಶುಕ್ರವಾರ, 15 ಡಿಸೆಂಬರ್ 2023 (11:23 IST)
ಹರಿಯಾಣಾದ ಮೇವತ್ ಜಿಲ್ಲೆಯ ಅಖ್ಲಿಮ್‌ಪುರ್ ಗ್ರಾಮದ ನಿವಾಸಿಯಾದ ಮೊಹಮ್ಮದ್, ಕಳೆದ 2020ರಿಂದ ಪಂಚಾಯಿತಿಯ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದಾನೆ. ಆದರೆ, ಇದೀಗ ಸೀಟು ಮಹಿಳೆಯರಿಗೆ ಮೀಸಲಾಗಿದ್ದರಿಂದ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗಿದ್ದಾನೆ. ಆದರೆ  ಕಣಕ್ಕಿಳಿಸಲೇ ಬೇಕು ಎನ್ನುವ ಏಕೈಕ ಕಾರಣಕ್ಕೆ ಎರಡನೇ ವಿವಾಹವಾಗಿ ಅಚ್ಚರಿ ಮೂಡಿಸಿದ್ದಾನೆ.
 
ಮುಂಬರುವ ಪಂಚಾಯಿತಿ ಚುನಾವಣೆಯಲ್ಲಿ ಕಣಕ್ಕಿಳಿಸಬೇಕು ಎನ್ನುವ ಏಕೈಕ ಕಾರಣದಿಂದಾಗಿ 47 ವರ್ಷ ವರ್ಷ ವಯಸ್ಸಿನ  ದೀನ್ ಮೊಹಮ್ಮದ್ ಎನ್ನುವ 8 ಮಕ್ಕಳ ತಂದೆ, 23 ವರ್ಷದ ಮಹಿಳೆಯನ್ನು ವಿವಾಹವಾದ ಅಚ್ಚರಿಯ ಘಟನೆ ವರದಿಯಾಗಿದೆ.
   
ಮತ್ತೆ ಪಂಚಾಯಿತಿ ಅಧ್ಯಕ್ಷ ಸ್ಥಾನ ದಕ್ಕಿಸಿಕೊಳ್ಳಬೇಕು ಎನ್ನುವ ಆಸೆಯಿಂದ ಮೊದಲ ಪತ್ನಿಯನ್ನು ಕಣಕ್ಕಿಳಿಸಲು ಪ್ರಯತ್ನಿಸಿದ್ದಾನೆ. ಆದರೆ  ಹೊಸ ಕಾನೂನಿನ ಪ್ರಕಾರ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಬೇಕಾದಲ್ಲಿ ಕನಿಷ್ಠ 8ನೇ ತರಗತಿ ಪಾಸಾಗಿರಬೇಕು, ಮೊದಲ ಪತ್ನಿ ಅನಕ್ಷರಸ್ಥೆಯಾಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿಲ್ಲ.
 
ನಂತರ ತನ್ನ ಸೋದರ ಸೊಸೆಯನ್ನು ಕಣಕ್ಕಿಳಿಸಲು ಪ್ರಯತ್ನಿಸಿದ್ದಾನೆ. ಆದರೆ ವಯೋಮಿತಿ ಗುರಿಯನ್ನು ತಲುಪಲು ಆಕೆ ವಿಫಲವಾಗಿದ್ದಾಳೆ. ದಾರಿ ಕಾಣದ ಮೊಹಮ್ಮದ್ ಚುನಾವಣೆಗೆ ಸ್ಪರ್ಧಿಸಲು ಅರ್ಹತೆಯಿರುವ 8ನೇ ತರಗತಿ ಪಾಸಾದ ಸಾಜಿದಾ ಎನ್ನುವ ಯುವತಿಯನ್ನು ವಿವಾಹವಾಗಿದ್ದಾನೆ.         
 
ಮೊಹಮ್ಮದ್ ಗ್ರಾಮಸ್ಥರ ಬೆಂಬಲದಿಂದಾಗಿ ತುಂಬಾ ಪ್ರಭಾವಶಾಲಿ ವ್ಯಕ್ತಿಯಾಗಿದ್ದು, ಮುಂಬರುವ ಚುನಾವಣೆಯಲ್ಲೂ ಜಯಗಳಿಸುವ ಆತ್ಮವಿಶ್ವಾಸ ಹೊಂದಿದ್ದಾನೆ. ಮತ್ತೆ ಪಂಚಾಯಿತಿ ಅಧ್ಯಕ್ಷನಾಗಬೇಕು ಎನ್ನುವ ಕನಸಿಗೆ ಹೊಸ ಕಾನೂನು ಕೊಡಲಿ ಪೆಟ್ಟು ನೀಡಿದೆ. 
 
ನನ್ನ ತಾಯಿ ಕೂಡಾ 2000 ರಿಂದ 2005ರವರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದರು. ನಾನು ಕೂಡಾ 2020ರಿಂದ 2022ರವರೆಗೆ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನನ್ನ ಎರಡನೇ ಪತ್ನಿ ಕೂಡಾ ಜಯಗಳಿಸುತ್ತಾಳೆ ಎನ್ನುವ ವಿಶ್ವಾಸವಿದೆ ಎಂದು ದೀನ್ ಮೊಹಮ್ಮದ್ ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments