Webdunia - Bharat's app for daily news and videos

Install App

ಮಹಾರಾಷ್ಟ್ರ ಮುಂದಿನ ಸಿಎಂ ಯಾರು: ಇನ್ನೂ ಸಸ್ಪೆನ್ಸ್ ಮುಗಿದಿಲ್ಲ

Krishnaveni K
ಸೋಮವಾರ, 25 ನವೆಂಬರ್ 2024 (11:08 IST)
ಮುಂಬೈ: ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಅಂತರದಿಂದ ಗೆದ್ದು ಅಧಿಕಾರಕ್ಕೇರಿದರೂ ಮಹಾಯುತಿ ವಿಕಾಸ್ ಮೈತ್ರಿಕೂಟದಲ್ಲಿ ಸಿಎಂ ಸ್ಥಾನದ ಕುರಿತು ಒಮ್ಮತ ಮೂಡಿಲ್ಲ.

ಸಿಎಂ ಸ್ಥಾನಕ್ಕಾಗಿ ಏಕನಾಥ ಶಿಂಧೆ ಮತ್ತು ದೇವೇಂದ್ರ ಫಡ್ನವಿಸ್ ನಡುವೆ ತಿಕ್ಕಾಟ ಮುಂದುವರಿದಿದೆ. ಇದುವರೆಗೆ ಶಿವಸೇನೆಯ ಏಕನಾಥ್ ಶಿಂದೆಯವರೇ ಮುಖ್ಯಮಂತ್ರಿಯಾಗಿದ್ದರು. ಆದರೆ ಈಗ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಗೆ ಸಿಎಂ ಸ್ಥಾನ ಸಿಗಬೇಕು ಎಂದು ಬಿಜೆಪಿಯ ಬೇಡಿಕೆಯಾಗಿದೆ. ಆದರೆ ಶಿಂಧೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಯಾರಿಲ್ಲ.

ಫಡ್ನವಿಸ್ ಗೆ ಮುಖ್ಯಮಂತ್ರಿ ಪಟ್ಟ ನೀಡುವಂತೆ ಆರ್ ಎಸ್ಎಸ್ ಒತ್ತಡವಿದೆ. ಆದರೆ ಶಿಂಧೆ ಬಣದ ಸದಸ್ಯರು ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಫಡ್ನವಿಸ್ ನೇತೃತ್ವದಲ್ಲಿ ಬಿಜೆಪಿ ಈ ಬಾರಿ 131 ಸ್ಥಾನಗಳನ್ನು ಗೆದ್ದಿದೆ. ಅತೀ ಹೆಚ್ಚು ಶಾಸಕರ ಬೆಂಬಲ ಅವರಿಗಿದೆ. ಹೀಗಾಗಿ ಅವರಿಗೇ ಸಿಎಂ ಸ್ಥಾನ ನೀಡಬೇಕು ಎಂಬುದು ಅವರ ಬೆಂಬಲಿಗರ ಒತ್ತಾಸೆಯಾಗಿದೆ.

ಇತ್ತ ಶಿಂಧೆ ಈ ಹಿಂದೆ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಗಳಿಂದಲೇ ಈಗ ಮಹಾರಾಷ್ಟ್ರದಲ್ಲಿ ಮತ್ತೆ ಮಹಾಯುತಿ ಅಧಿಕಾರಕ್ಕೇರಿದೆ. ಅವರಿಗೆ ಒಟ್ಟು 57 ಶಾಸಕರ ಬೆಂಬಲವಿದೆ. ಈ ಕಾರಣಕ್ಕೆ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬುದು ಅವರ ಬೆಂಬಲಿಗರ ಅಭಿಪ್ರಾಯ. ಇಂದು ಮಹಾ ಮುಂದಿನ ಸಿಎಂ ಕುತೂಹಲಕ್ಕೆ ತೆರೆ ಬೀಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ ಬೀಗರೂಟಕ್ಕೆ ಬರಕ್ಕಾಗುತ್ತೆ, ಸಿಗಂದೂರಿಗೆ ಬರಕ್ಕಾಗಲ್ವಾ: ಸಿಎಂಗೆ ಪ್ರತಾಪ್ ಸಿಂಹ ಗುದ್ದು

ನಿಮಿಷಾ ಪ್ರಿಯಾಗೆ ಕ್ಷಮೆಯೇ ಇಲ್ಲ, ಪರಿಹಾರ ಹಣವೂ ಬೇಡ ಎಂದ ಯೆಮನ್ ಕುಟುಂಬ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

40 ವರ್ಷ ಮೇಲ್ಪಟ್ಟವರು ಹೃದಯಾಘಾತವಾಗದಂತೆ ಈ ಟಿಪ್ಸ್ ಪಾಲಿಸಿ: ಡಾ ದೇವಿಪ್ರಸಾದ್ ಶೆಟ್ಟಿ

ಮುಂದಿನ ಸುದ್ದಿ
Show comments