Webdunia - Bharat's app for daily news and videos

Install App

ಯುವತಿಯ ತಲೆ ಕೆಡಿಸುತ್ತಿರುವವರು ಯಾರು? : ಕಾರ್ಗಿಲ್ ಹುತಾತ್ಮನ ಪುತ್ರಿಯ ಎಫ್‌ಬಿ ಪೋಸ್ಟ್‌ಗೆ ರಿಜಿಜು ಪ್ರತಿಕ್ರಿಯೆ

Webdunia
ಸೋಮವಾರ, 27 ಫೆಬ್ರವರಿ 2017 (16:22 IST)
ಕಾರ್ಗಿಲ್ ಹುತಾತ್ಮ ಸೈನಿಕನ ಪುತ್ರಿ ಬಿಜೆಪಿ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿ ವಿರುದ್ಧ ಫೇಸ್‌ಬುಕ್ ಅಭಿಯಾನ ಪ್ರಾರಂಭಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್ ರಿಜಿಜು, ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ತಲೆ ಕೆಡಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ್ದಾರೆ.

 
ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ರಾಮಜಾಸ್ ಕಾಲೇಜಿನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳುವಂತೆ ಜೆಎನ್‌ಯು ವಿದ್ಯಾರ್ಥಿ ಉಮರ್ ಖಾಲಿದ್‌ಗೆ(ದೇಶವಿರೋಧಿ ಘೋಷಣೆ ಕೂಗಿದ ಪ್ರಕರಣದ ಆರೋಪಿ) ಆಮಂತ್ರಣ ನೀಡಲಾಗಿತ್ತು. ಇದನ್ನು ವಿರೋಧಿಸಿ ಎಬಿವಿಪಿ, ಕಾಲೇಜು ಆವರಣದಲ್ಲಿ ಗಲಾಟೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಎಬಿವಿಪಿ ವಿರುದ್ಧ ಕ್ಯಾಪ್ಟನ್ ಮನ್ದೀಪ್ ಸಿಂಗ್ ಮಗಳು ಗುರ್ ಮೆಹರ್ ಕೌರ್‌ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. 
 
ರಾಮಜಾಸ್ ಕಾಲೇಜಿನಲ್ಲಿ ಗಲಾಟೆ ನಡೆದ ಬಳಿಕ ಕೌರ್, ನಾನು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ. ನನಗೆ ಎಬಿವಿಪಿ ಭಯವಿಲ್ಲ. ನಾನು ಒಬ್ಬಂಟಿ ಅಲ್ಲ. ದೇಶದ ಪ್ರತಿಯೊಬ್ಬ ವಿದ್ಯಾರ್ಥಿ ನನ್ನ ಜತೆ ಇದ್ದಾರೆ. #StudentsAgainstABVP"- ಎಂದು ಲೇಡಿ ಶ್ರೀರಾಮ್ ಕಾಲೇಜು ವಿದ್ಯಾರ್ಥಿನಿಯಾದ ಕೌರ್ ಫೇಸ್‌ಬುಕ್ ಪೋಸ್ಟ್ ಎಬಿವಿಪಿ ವಿರುದ್ಧ ತೊಡೆ ತಟ್ಟಿದ್ದರು.
 
 ಆಕೆ ತನ್ನ ಅಭಿಪ್ರಾಯವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ ಬಳಿಕ ಎಬಿವಿಪಿ ಕಾರ್ಯಕರ್ತರು ಆಕೆಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. 
 
ಖಾಸಗಿ ಚಾನಲ್‌ವೊಂದರ ಸಂದರ್ಶನದಲ್ಲಿ ಮಾತನಾಡಿರುವ ವಿದ್ಯಾರ್ಥಿನಿ ಗುರ್‌ವೆುಹರ್ ಕೌರ್, ನಾನು ಎಬಿವಿಪಿ ಸಂಘಟನೆ ಕುರಿತು ಮಾತನಾಡಿದ ಬಳಿಕ ನನಗೆ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಬಂದಿರುವುದಾಗಿ ಹೇಳಿದ್ದಾಳೆ. 
 
ನನಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ನನ್ನನ್ನು ದೇಶದ್ರೋಹಿ ಎಂದು ಹಂಗಿಸುತ್ತಿದ್ದಾರೆ.ರಾಹುಲ್ ಎಂಬಾತ ನಾನು ನಿನ್ನನ್ನು ಹೇಗೆ ಅತ್ಯಾಚಾರ ಮಾಡುತ್ತೇನೆ ಎಂದು ವಿವರವಾಗಿ ಕಮೆಂಟ್ ಬಾಕ್ಸ್‌ನಲ್ಲಿ ಹಾಕಿದ್ದಾನೆ. ಇದೆಲ್ಲ ನನಗೆ ಅತಿಯಾದ ಭಯವನ್ನುಂಟು ಮಾಡುತ್ತಿದೆ- ಎಂದಾಕೆ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾಳೆ. 
 
ಆಕೆಯ ಪೋಸ್ಟ್ ವೈರಲ್ ಆಗಿ ಹರಿದಾಡಿದ್ದು 3,000 ಬಾರಿ ಹಂಚಿಕೆಯಾದ ಈ ಪೋಸ್ಟ್ ನಾಲ್ಕು ದಿನಗಳಲ್ಲಿ 10,000ಕ್ಕೂ ಹೆಚ್ಚು ಕಮೆಂಟ್‌ಗಳನ್ನು ಪಡೆದಿತ್ತು. ಕಮೆಂಟ್‌ಗಳಲ್ಲಿ ಹೆಚ್ಚಿನವುಗಳಲ್ಲಿ ಆಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
 
ಕೌರ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಎಬಿವಿಪಿ ರಾಷ್ಟ್ರೀಯ ವಕ್ತಾರ ಸಾಕೇತ್ ಬಹುಗುಣ, ನಮ್ಮ ದೇಶದ ಸಮಗ್ರತೆಗೆ ಧಕ್ಕೆ ಬಂದರೆ ನಾವು ಅದನ್ನು ವಿರೋಧಿಸಿಯೇ ತೀರುತ್ತೇವೆ, ಎಂದಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments