Webdunia - Bharat's app for daily news and videos

Install App

ಪ್ರಧಾನಿಯನ್ನು ಯಾರು ಕೊಲ್ಲುತ್ತಾರೆ?: ಆನಂದ ಶರ್ಮಾ

Webdunia
ಗುರುವಾರ, 17 ನವೆಂಬರ್ 2016 (16:29 IST)
ದೊಡ್ಡ ಮುಖಬೆಲೆಯ ನೋಟು ನಿಷೇಧ ಮಾಡಿದ್ದಕ್ಕೆ ಕೆಲವರು ನನ್ನನ್ನು ಕೊಲ್ಲ ಬಯಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಸಂಸದ ಆನಂದ ಶರ್ಮಾ ನಿಮ್ಮನ್ನು ಕೊಲ್ಲಲು ಬಯಸುವವರು ಯಾರು ಎಂದು ಸ್ಪಷ್ಟ ಪಡಿಸಿ ಎಂದಿದ್ದಾರೆ. 
 
ರಾಜ್ಯಸಭೆಯಲ್ಲಿ ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಆರಂಭವಾದ ಚರ್ಚೆಯ ನೇತೃತ್ವ ವಹಿಸಿ ಮಾತನಾಡುತ್ತಿದ್ದ ಶರ್ಮಾ, ಮೋದಿ  ಅವರು ಗೋವಾದಲ್ಲಿ ಆಡಿದ್ದ ಮಾತುಗಳನ್ನು ಉಲ್ಲೇಖಿಸಿ, ನಿಮ್ಮನ್ನು ಹತ್ಯೆಗೈಯ್ಯಲು ಬಯಸುತ್ತಿರುವವರು ಯಾರು ಪ್ರಧಾನಿ ಅವರೇ? ಇದು ಯಾರ ಪಿತೂರಿ? ಇದರ ಹಿಂದಿರುವ ಸಂಘಟನೆ ಯಾವುದು? ದೇಶವಾಸಿಗಳು ಇದನ್ನು ತಿಳಿಯಬಯಸಿದ್ದಾರೆ. ಪ್ರಧಾನಿ ಮತ್ತು ಗೃಹ ಸಚಿವರು ಇದಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. 
 
ನಾವು ಪ್ರಧಾನಿ ಬಹುಕಾಲ ಬದುಕಬೇಕೆಂದು ಬಯಸಿದ್ದೇವೆ. ನಿಮ್ಮ ವಿರುದ್ಧ ಸಂಚು ಹೂಡುತ್ತಿರುವವರ ಹೆಸರನ್ನು ಸಂಸತ್ತಿಗೆ, ದೇಶಕ್ಕೆ ತಿಳಿಸಿ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಶರ್ಮಾ ವ್ಯಂಗ್ಯವಾಡಿದ್ದಾರೆ. 
 
ಕಳೆದ ಭಾನುವಾರ ಪಣಜಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ದೇಶದಲ್ಲಿ ಕೆಲವೊಂದು ವಿರೋಧಿ ಶಕ್ತಿಗಳು ನನ್ನನ್ನು ಮುಗಿಸಲು ಸಂಚು ರೂಪಿಸುತ್ತಿವೆ. ಆದರೆ ನಾನದಕ್ಕೆ ಜಗ್ಗುವುದಿಲ್ಲ ಎಂದು ಹೇಳಿದ್ದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments