ಯಾರು ಕಚ್ಚಬಲ್ಲರೋ ಅವರು ಸರ್ಕಾರವನ್ನು ನಡೆಸುತ್ತಿದ್ದಾರೆ: ರೇಣುಕಾ ಚೌಧರಿ

Sampriya
ಸೋಮವಾರ, 1 ಡಿಸೆಂಬರ್ 2025 (17:44 IST)
Photo Credit X
ನವದೆಹಲಿ: ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ ಸಂಸತ್ತಿಗೆ ನಾಯಿಯನ್ನು ಕರೆತರುವ ಮೂಲಕ ಬಿಜೆಪಿ ಸದಸ್ಯರ ತೀವ್ರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. 

ಎಸ್‌ಐಆರ್ ಕುರಿತು ಪ್ರತಿಪಕ್ಷಗಳ ಪ್ರತಿಭಟನೆಯಿಂದ ಗುರುತಿಸಲ್ಪಟ್ಟ ಒಂದು ದಿನದ ಬಳಿಕ ಚಳಿಗಾಲದ ಅಧಿವೇಶನದಲ್ಲಿ ಈ ಘಟನೆ ನಡೆದಿದೆ. 

ಬಳಿಕ ಮಾಧ್ಯಮಗಳಿಗೆ ನಾಯಿ ಕರೆತಂದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರೇಣುಕಾ ಚೌಧರಿ ಅವರು, ತನ್ನ ಕಾರ್ಯಗಳನ್ನು ಸಮರ್ಥಿಸಿಕೊಂಡರು, ಸರ್ಕಾರವು ಪ್ರಾಣಿಗಳನ್ನು ಇಷ್ಟಪಡುವುದಿಲ್ಲ. ನಿರುಪದ್ರವ ಪ್ರಾಣಿ ಒಳಗೆ ಬಂದರೆ ಏನು ಹಾನಿ 
"ಇದು ಆಕ್ರಮಣಕಾರಿ ಅಲ್ಲ, ನಾಯಿ ಯಾವುದೇ ಬೆದರಿಕೆಯನ್ನು ಒಡ್ಡಲಿಲ್ಲ ಮತ್ತು ಕೇವಲ ವಾಹನದೊಳಗೆ ತನ್ನೊಂದಿಗೆ ಹೋಗುತ್ತಿದೆ ಎಂದು ಒತ್ತಾಯಿಸಿದರು.

ಯಾರು ಕಚ್ಚಬಲ್ಲರೋ ಅವರು ನಿಜವಾಗಿಯೂ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದೂ ಕಿಡಿಕಾರಿದರು. 

ಈ ಬಗ್ಗೆ ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ತೀವ್ರವಾಗಿ ಪ್ರತಿಕ್ರಿಯಿಸಿ, "ರೇಣುಕಾ ಚೌಧರಿ ಅವರು ಸಂಸತ್ತಿಗೆ ನಾಯಿಯನ್ನು ತಂದರು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು" ಎಂದು ಹೇಳಿದ್ದಾರೆ.

"ಕೆಲವು ಸಂಸದೀಯ ಸವಲತ್ತುಗಳನ್ನು ಹೊಂದಿರುವುದು ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂದು ಅರ್ಥವಲ್ಲ" ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಮುಂದಿನ ಸುದ್ದಿ
Show comments