ಅತ್ಯುನ್ನತ ನಾಗರಿಕ ಪ್ರಶಸ್ತಿ ಯಾರ ಮುಡಿಗೆ?

Webdunia
ಗುರುವಾರ, 17 ಫೆಬ್ರವರಿ 2022 (09:35 IST)
ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್ನ ಅಧ್ಯಕ್ಷರಾದ ರತನ್ ಟಾಟಾ ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬುಧವಾರ ಪ್ರದಾನ ಮಾಡಲಾಯಿತು.
 
ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ “ಅಸ್ಸಾಂ ಬೈಭವ್” ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ ನೀಡಲಾಯಿತು.

ಪ್ರಶಸ್ತಿಯು ಫಲಕ, ನಗದು ಮೊತ್ತವಾದ 5 ಲಕ್ಷ ರೂಪಾಯಿ ಹಾಗೂ ಪದಕವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಜನವರಿ 24ರಂದು ಸಮಾರಂಭವೊಂದರಲ್ಲಿ ನೀಡಬೇಕಾಗಿತ್ತು. ಆದರೆ ವೈಯಕ್ತಿಕ ಕಾರಣಗಳಿಗಾಗಿ ರತನ್ ಟಾಟಾ ಅವರಿಗೆ ಭಾಗವಹಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

“ಉದ್ಯಮಿಯಾಗಿ ಹಾಗೂ ದಾನಿಯಾಗಿ ರತನ್ ಟಾಟಾ ಅವರು ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆ,” ಎಂದು ಶರ್ಮಾ ಹೇಳಿದ್ದಾರೆ.

ಜನವರಿ 24ನೇ ತಾರೀಕಿನಂದೇ ಅಸ್ಸಾಂ ರಾಜ್ಯಪಾಲರು ರಾಜ್ಯದ ಇತರ ಎರಡು ನಾಗರಿಕ ಪ್ರಶಸ್ತಿಗಳಾದ “ಅಸ್ಸಾಂ ಸೌರವ್” ಮತ್ತು “ಅಸ್ಸಾಂ ಗೌರವ್” ಅನ್ನು ವಿವಿಧ ಕ್ಷೇತ್ರದ 18 ಮಂದಿಗೆ ವಿತರಣೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments