Webdunia - Bharat's app for daily news and videos

Install App

ರಾಹುಲ್ ಅಕ್ರಮ ಬಂಧನದ ವಿರುದ್ಧ ಎಫ್ಐಆರ್ ಏಕಿಲ್ಲ: ದಿಗ್ವಿಜಯ್ ಸಿಂಗ್

Webdunia
ಶುಕ್ರವಾರ, 4 ನವೆಂಬರ್ 2016 (15:03 IST)
ಒಆರ್‌ಒಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎರಡು ದಿನಗಳಲ್ಲಿ ಮೂರು ಬಾರಿ ಬಂಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. 
 
ಯೋಧ ರಾಮ್ ಕಿಶನ್ ಗ್ರೇವಾಲ್ ಅವರ ಆತ್ಮಹತ್ಯೆಯನ್ನು ಖಂಡಿಸಿ ಕೈಗೊಂಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿಯವರನ್ನು ಕಳೆದ ಎರಡು ದಿನಗಳಲ್ಲಿ ಮೂರು ಬಾರಿ ಬಂಧಿಸಲಾಗಿತ್ತು. 
 
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಡಿಯಲ್ಲಿ ಬರುವ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿರುವ ಸಿಂಗ್, ಮಾಜಿ ಯೋಧನ ಸ್ಮರಣೆಯಲ್ಲಿ ರಾಜಕೀಯ ನಾಯರೊಬ್ಬರು ಶಾಂತಿಯುತವಾದ ಮೋಂಬತ್ತಿ  ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು ತಪ್ಪೇ ಎಂದು ಪ್ರಶ್ನಿಸಿದ್ದಾರೆ. 
 
ಕಾನೂನಿನ ಯಾವ ನಿಬಂಧನೆಗಳ ಅಡಿಯಲ್ಲಿ ರಾಹುಲ್ ಅವರನ್ನು ಎರಡು ದಿನಗಳಲ್ಲಿ ಮೂರು ಬಾರಿ ಬಂಧಿಸಲಾಗಿದೆ. ಈ ಅಕ್ರಮ ಬಂಧನದ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್‌ನ್ನು ದಾಖಲಿಸಿಲ್ಲ ಎಂದು ಸಿಟಿ ಪೊಲೀಸರಿಗೆ ಅವರು ಸವಾಲೆಸೆದಿದ್ದಾರೆ. 
 
ಕಾಂಗ್ರೆಸ್ ಉಪಾಧ್ಯಕ್ಷ, ಸಂಸದನ ಜತೆಗೆ ದೆಹಲಿಯಲ್ಲಯೇ ಪೊಲೀಸರು ಹೀಗೆ ವರ್ತಿಸುತ್ತಿದ್ದಾರೆ ಎಂದರೆ ಗ್ರಾಮೀಣ ಭಾಗದಲ್ಲಿ ಸಾಮಾನ್ಯ ಮನುಷ್ಯನ ಜತೆ ಏನಾಗಿರುತ್ತಿರಬೇಡ ಎಂದು ಅವರು ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments