Webdunia - Bharat's app for daily news and videos

Install App

ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ್ದಾದ್ರು ಯಾಕೆ!?

Webdunia
ಶುಕ್ರವಾರ, 19 ಆಗಸ್ಟ್ 2022 (09:08 IST)
ಚೆನ್ನೈ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯೇ ಪತಿಯ ಗುಪ್ತಾಂಗಕ್ಕೆ ಕುದಿಯುವ ಬಿಸಿ ನೀರು ಎರಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
 
ಇದೀಗ ಸುಟ್ಟ ಗಾಯದಿಂದ ಬಳಲುತ್ತಿರುವ 32 ವರ್ಷದ ವ್ಯಕ್ತಿಯನ್ನು ನೆರೆಹೊರೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡಿರುವ ವ್ಯಕ್ತಿಯನ್ನು ಪುದುಪಟ್ಟು ಮೂಲದ ತಂಗರಾಜ್ ಎಂದು ಗುರುತಿಸಲಾಗಿದ್ದು, ಏಳು ವರ್ಷಗಳ ಹಿಂದೆ 29 ವರ್ಷದ ಪ್ರಿಯಾಳನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 

ತಂಗರಾಜ್ ಮೊಬೈಲ್ ತಯಾರಿಸುವ ಕಂಪನಿಯಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ತಂಗರಾಜ್ ತನ್ನ ಕೆಲಸದ ಸ್ಥಳದಲ್ಲಿ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಪ್ರಿಯಾ ಅನೇಕ ಬಾರಿ ಪತಿಯೊಂದಿಗೆ ಜಗಳವಾಡಿದ್ದಳು ಎಂದು ತಿಳಿದುಬಂದಿದೆ.

ಮಂಗಳವಾರ ದಂಪತಿ ನಡುವೆ ಮತ್ತೆ ಜಗಳ ಆಗಿದ್ದು, ನಂತರ ತಂಗರಾಜ್ ಮಲಗಿದ್ದರು. ಆದರೆ ಇನ್ನೂ ಅಸಮಾಧಾನಗೊಂಡ ಪ್ರಿಯಾ, ಕುದಿಯುವ ನೀರನ್ನು ಕಾಯಿಸಿ ತಂಗರಾಜ್ ಅವರ ಗುಪ್ತಾಂಗದ ಮೇಲೆ ಸುರಿದಿದ್ದಾಳೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ