Webdunia - Bharat's app for daily news and videos

Install App

ಸಾಕ್ಷ್ಯಗಳಿದ್ದರೂ ಸೋನಿಯಾರನ್ನೇಕೆ ಬಂಧಿಸುತ್ತಿಲ್ಲ, ಕೇಜ್ರಿವಾಲ್ ಪ್ರಶ್ನೆ

Webdunia
ಶನಿವಾರ, 30 ಏಪ್ರಿಲ್ 2016 (15:58 IST)
ಅಗಸ್ಟಾ ವೆಸ್ಟಲ್ಯಾಂಡ್ ಹಗರಣ ದೊಡ್ಡ ಮಟ್ಟದಲ್ಲಿ ರಾಜಕೀಯ ಕೋಲಾಹಲವನ್ನು ಹುಟ್ಟಿಸುತ್ತ ಸಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಧ್ವನಿ ಎತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಂಧನಕ್ಕೆ ಒತ್ತಾಯಿಸಿದ್ದಾರೆ. 


ಈ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು ಒಂದು ವೇಳೆ ಸೋನಿಯಾ ಅವರ ಜಾಗದಲ್ಲಿ ನಾನು ಇದ್ದಿದ್ದೇ ಆದರೆ ನನ್ನನ್ನು ಮನೆಯಿಂದ ಎಳೆದು ತರಲಾಗುತ್ತಿತ್ತು ಎಂದು ಹೇಳಿದ್ದಾರೆ. 
 
ಅವರು(ಬಿಜೆಪಿ ಸರ್ಕಾರ) ಯಾಕೆ ಸೋನಿಯಾ ಗಾಂಧಿ ಅವರನ್ನು ಬಂಧಿಸುತ್ತಿಲ್ಲ. ನಾನಾಗಿದ್ದರೆ ಮನೆಯಿಂದ ಎಳೆದು ತರುತ್ತಿದ್ದರು. ರಾಬರ್ಟ್ ವಾದ್ರಾ ಅವರನ್ನು ಯಾಕೆ ಬಂಧಿಸುತ್ತಿಲ್ಲ? ಸೋನಿಯಾ ಮತ್ತು ರಾಬರ್ಟ್ ವಿರುದ್ಧ ಸಾಕ್ಷ್ಯಗಳಿವೆ ಮತ್ತು ಅವರು (ಬಿಜೆಪಿ) ಅಧಿಕಾರದಲ್ಲಿಯೂ ಇದ್ದಾರೆ ಎಂದು ಕೇಜ್ರಿವಾಲ್ ಸವಾಲೆಸೆದಿದ್ದಾರೆ. 
 
ಏತನ್ಮಧ್ಯೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಕೂಡ ತಮ್ಮ ಹೇಳಿಕೆಯನ್ನು ಅಳಿಸಿ ಹಾಕಿದ್ದರ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರಲ್ಲದೆ ಸೋನಿಯಾ ಗಾಂಧಿ ಅವರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments